ಸಿಂಧನೂರು . ಫೆಬ್ರುವರಿ 03
ಮಾನವಿ ತಾಲ್ಲೂಕಿನ ಸುಮಂಗಲ ಸಿಕ್ಕಲ್ ತಾಂಡ ನಿವಾಸಿ ವಿದ್ಯಾರ್ಥಿನಿ ಸುಮಂಗಲ (ವಯಸ್ಸು 21 ) ಅವರು ಸಿಂಧನೂರು ಸಮೀಪದ ರೈಲ್ವೆ ಹಳಿಯ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಗಳವಾರ ನಡೆದಿದೆ.
ಸ್ಥಳೀಯರು ಮಧ್ಯಾಹ್ನ ವೇಳೆ ರೈಲ್ವೆ ಹಳಿಯ ಬಳಿ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣ ಸಿಂಧನೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಡಿವೈಎಸ್ಪಿ ಚಂದ್ರಶೇಖರ್, ವಿರಾರೆಡ್ಡಿ ಪಿ ಐ, ಪೊಲೀಸ್ ಸಿಬ್ಬಂದಿಗಳಾದ ದೇವೇಂದ್ರಪ್ಪ,ಶಿವರಾಜ್ ,ಸೋಮನಗೌಡ ಆಗಮಿಸಿ ಪರಿಶೀಲನೆ ನಡೆಸಿದರು. ಸಂಬಂಧಿಕರು ಬಂದು ನಂತರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವಿದ್ಯಾರ್ಥಿನಿ ಯಾವುದೋ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಈ ಸಂಬಂಧ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ದುರ್ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಆಳವಾದ ದುಃಖ ಆವರಿಸಿದೆ. ಶಿಕ್ಷಣ ಪಡೆಯುತ್ತಿದ್ದ ಯುವ ವಿದ್ಯಾರ್ಥಿನಿಯ ಅಕಾಲಿಕ ಸಾವು ಸಾರ್ವಜನಿಕರಲ್ಲಿ ಕಳವಳ ಮೂಡಿಸಿದೆ.
👉 ಸೂಚನೆ: ಜೀವನದ ಯಾವುದೇ ಹಂತದಲ್ಲಿ ಮಾನಸಿಕ ಒತ್ತಡ ಅಥವಾ ನಿರಾಶೆ ಎದುರಾದಲ್ಲಿ, ಆತ್ಮಹತ್ಯೆ ಪರಿಹಾರವಲ್ಲ. ಸಹಾಯಕ್ಕಾಗಿ ಕುಟುಂಬದವರು, ಸ್ನೇಹಿತರು ಅಥವಾ ಸಮಾಲೋಚಕರನ್ನು ಸಂಪರ್ಕಿಸುವುದು ಅತ್ಯಂತ ಅಗತ್ಯ.













