ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಸಿಪಿಐ(ಎಂಎಲ್)ರೆಡ್ ಸ್ಟಾರ್ ಪಕ್ಷದ ಮಾಬುಸಾಬ ಬೆಳ್ಳಟ್ಟಿ ಸ್ಪರ್ದೆ !

Advertisement
ಏಪ್ರಿಲ್ 16.ಸಿಂಧನೂರು ರೈತ-ಕಾರ್ಮಿಕ-ಮಹಿಳಾ, ಅಸಂಘಟಿತ ಕೃಷಿ-ಕೂಲಿ ಕಾರ್ಮಿಕ, ದಲಿತಪರ, ಅಲ್ಪಸಂಖ್ಯಾತ ಮತ್ತು ವಿದ್ಯಾರ್ಥಿ ಸಂಘಟನೆಗಳ ಒಮ್ಮತದ ಅಭ್ಯರ್ಥಿಯಾಗಿ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಸಿಪಿಐ(ಎಂಎಲ್)ರೆಡ್ ಸ್ಟಾರ್ ಪಕ್ಷದ ಮಾಬುಸಾಬ ಬೆಳ್ಳಟ್ಟಿ ಸ್ಪರ್ದೆ.

https://youtu.be/h03xkTAfAYg

ಸಿಂಧನೂರು ವಿಧಾನಸಭಾ ಚುನಾವಣೆ ಒಳಗೊಂಡಂತೆ ರಾಜ್ಯದಲ್ಲಿ ಕೋಮುವಾದಿ ಬಿಜೆಪಿ ಸರಕಾರವನ್ನು ತೊಲಗಿಸಲು ಹಾಗೂ ನಾವು ಜ್ಯಾತ್ಯಾತೀತರೆಂದು ಮತದಾರರಿಗೆ ಮಂಕು ಬೂದಿ ಎರಚುವ ಜೆಡಿಎಸ್ ಹಾಗೂ ಕಾಂಗ್ರೇಸ್ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿಯಾಗಲಿ, ರೈತ-ಕಾರ್ಮಿಕ ಮಹಿಳಾ, ಅಲ್ಪಸಂಖ್ಯಾತ, ದಲಿತ, ವಿದ್ಯಾರ್ಥಿ-ಯುವಜನತೆಯ ಅಭಿವೃದ್ಧಿ ವಿಚಾರದ ಕುರಿತು ಅಥವಾ ಯಾವುದೇ ಜನಪರ ಯೋಜನೆಗಳನ್ನು ಜಾರಿಗೊಳಿಸದೆ, ನಿತ್ಯ ಬೆಲೆ ಏರಿಕೆ, ಕೋಮು ಗಲಭೆ, ಜಾತಿ-ಧರ್ಮದ ರಾಜಕೀಯ ಮಾಡುತ್ತ ಚುನಾವಣೆ ಹತ್ತಿರ ಬರುತ್ತಿದ್ದಂತೆ ಟಿಕೆಟ್ ದೊರೆಯದಿದ್ದರೆ ಕಾಂಗ್ರೇಸ್‌ನಿಂದ, ಬಿಜೆಪಿಗೆ, ಬಿಜೆಪಿಯಿಂದ ಜೆಡಿಎಸ್‌ಗೆ ಪಕ್ಷಾಂತರ ಮಾಡುವುದು ಬಿಟ್ಟರೆ ಬೇರೇನು ಇಲ್ಲಾ. ಅದಕ್ಕಾಗಿ ಸಿಂಧನೂರಿನಲ್ಲಿ ಪರ್ಯಾಯ ಶಕ್ತಿ ಅಥವಾ ನಮ್ಮದೇ ಅಭ್ಯರ್ಥಿ ಆರಿಸಿ ತರುವ ನಿಟ್ಟಿನಲ್ಲಿ ಸಮಾನ ಮನಸ್ಕ ಪಕ್ಷಗಳು ಹಾಗೂ ಸಂಘ-ಸಂಸ್ಥೆಗಳ ಪ್ರಮುಖ ಮುಖಂಡರ ಸಭೆಯನ್ನು ಸಿಂಧನೂರಿನ ನಗರದಲ್ಲಿ ಆಯೋಜಿಸಲಾಗಿತ್ತು. ಈ ಸಭೆಗೆ ಎಲ್ಲರ ಅಪೇಕ್ಷೇಯ ಮೇರೆಗೆ ಸಿಪಿಐ(ಎಂಎಲ್)ರೆಡ್ ಸ್ಟಾರ್ ಪಕ್ಷದ ಪಾಲಿಟ್ ಬ್ಯೂರೋ ಸದಸ್ಯರಾದ, ಆರ್.ಮಾನಸಯ್ಯರವರನ್ನು ಸಭೆಗೆ ಕರೆಸಿ, ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿ ಸುದೀರ್ಘವಾಗಿ ಸುಮಾರು 3 ಗಂಟೆಗಳ ಕಾಲ ಚರ್ಚಿಸಿ ಅಂತಿಮವಾಗಿ ಎಲ್ಲರ ಒಮ್ಮತದ ನಿರ್ಧಾರದ ಮೇರೆಗೆ ಸಿಪಿಐ(ಎಂಎಲ್)ರೆಡ್ ಸ್ಟಾರ್ ಪಕ್ಷದ ತಾಲೂಕು ಕಾರ್ಯದರ್ಶಿ ಮಾಬುಸಾಬ ಬೆಳ್ಳಟ್ಟಿಯವರನ್ನು ಆಯ್ಕೆಗೊಳಿಸಿ ದಿನಾಂಕ : 19.04.2023 ರಂದು ನಾಮಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.



ಎಂ.ಗಂಗಾಧರ

ರಾಜ್ಯ ಸಮಿತಿ ಸದಸ್ಯರು ಸಿಪಿಐ(ಎಂಎಲ್)ರೆಡ್ ಸ್ಟಾರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್