ಮೇ 09. ಸಿಂಧನೂರು ಗಂಗಾವತಿ ಮುಖ್ಯ ರಸ್ತೆಯ ಚೆನ್ನಹಳ್ಳಿಯ ಹತ್ತಿರ ಬರುವ ಚೆಕ್ ಪೋಸ್ಟ್ರಲ್ಲಿ ಕರ್ತವ್ಯ ನಿರ್ವಹಿಸುವ ಚುನಾವಣೆ ಅಧಿಕಾರಿಗಳು ವಾಹನಗಳನ್ನು ತಪಾಸಣೆ ಮಾಡದೆ ನಿರ್ಲಕ್ಷ ಮೊಬೈಲಲ್ಲಿ ಕಾರ್ಯನಿರತರಾದ ಅಧಿಕಾರಿಗಳು.
https://youtu.be/rO7TfJ_zmLQ
ಸಾಕಷ್ಟು ವಾಹನಗಳು ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಕನಕಗಿರಿ ವಿಧಾನಸಭಾ ಕ್ಷೇತ್ರಕ್ಕೆ ಕನಕಗಿರಿ ವಿಧಾನಸಭಾ ಕ್ಷೇತ್ರದಿಂದ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಸಂಪರ್ಕ ಹೊಂದಿರುವ ರಸ್ತೆಯಲ್ಲಿ ಬರುವ ಕಾರಟಗಿ ವರ ವಲಯದ ಚನ್ನಳ್ಳಿ ಕ್ರಾಸ್ ಬಳಿ ಇರುವ ಚೆಕ್ ಪೋಸ್ಟ್ರಲ್ಲಿ ಚುನಾವಣೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಸಾಕಷ್ಟು ವಾಹನಗಳು ಆ ಕಡೆಯಿಂದ ಈ ಕಡೆ ಈ ಕಡೆಯಿಂದ ಆ ಕಡೆಗೆ ಹೋಗುತ್ತಿದ್ದರೂ ಕೂಡ ಯಾವುದೇ ರೀತಿ ಪರಿಶೀಲನೆ ಮಾಡದೆ ನೆರಳಿನಲ್ಲಿ ಕೂತುಕೊಂಡು ಮೊಬೈಲಲ್ಲಿ ಕಾರ್ಯನಿರತರಾಗಿದ್ದಾರೆ ಇವರಿಗೆ ಹೇಳೋರಿಲ್ಲ ಕೇಳುವವರಿಲ್ಲ ಈ ಕೂಡಲೇ ಸಂಬಂಧಪಟ್ಟ ಚುನಾವಣೆ ಅಧಿಕಾರಿಗಳು ನಿರ್ಲಕ್ಷ ವಹಿಸಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಇನ್ನು ಕೆ ಆರ್ ಎಸ್ ಪಾರ್ಟಿ ರಾಯಚೂರು ಜಿಲ್ಲಾ ಅಧ್ಯಕ್ಷ ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನಿರುಪಾದಿ ಗೋಮರ್ಸಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.













