
ನಂತರ ಯೋಗ ತರಬೇತುದಾರರಾದ ಡಾ.ತಿಮ್ಮಪ್ಪ ವಡ್ಡೆಪಲ್ಲಿ ಹಾಗೂ ಪೂಜಾ ಅವರು ಯೋಗಭ್ಯಾಸವನ್ನು ಮಾಡಿಸಿದರು. ನಂತರ ಜೂ.೧೯ರಂದು ನಡೆದ ಯೋಗ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ಯೋಗಪಟುಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರೊಭೇಷನರಿ ಐಎಎಸ್ ಅಧಿಕಾರಿ ಅಪರ್ಣಾ, ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸಹಾಯಕ ಆಯುಕ್ತ ರಜನಿಕಾಂತ ಚೌಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಪಾಟೀಲ್, ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ ರೆಡ್ ಕ್ರಾಸ್ ಸಂಸ್ಥೆಯ ದಂಡಪ್ಪ ಬಿರದಾರ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.









