ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

101ನೇ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನದ ಸೇವಾ ಕಾರ್ಯದಿಂದ ಕಲೆಗೊಂಡ ಶಾಲೆ

Advertisement
ಜೂನ್ 16.ಮಸ್ಕಿ ಅಭಿನಂದನ್ ಸಂಸ್ಥೆಯ ಸ್ವಚ್ಚತಾ ಅಭಿಯಾನ ಸಂಡೇ ಫಾರ್ ಸೋಶಿಯಲ್ ವರ್ಕ್ ಅಭಿಯಾನದ ಅಂಗವಾಗಿ 101ನೇಯ ಸೇವಾ ಕಾರ್ಯವನ್ನು ಮಸ್ಕಿ ತಾಲೂಕಿನ ಬೈಲಗುಡ್ಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಯಿತು. ಈ ಸ್ವಚ್ಛತಾ ಕಾರ್ಯದ ಮೂಲಕ ಈ ಗ್ರಾಮದ ಸರ್ಕಾರಿ ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿ ಶಾಲೆಯ ಗೋಡೆಗಳಿಗೆ, ಕಾಂಪೌಂಡಿಗೆ ಹಾಗೂ ಕಂಬಗಳಿಗೆ ಬಣ್ಣವನ್ನು ಹಚ್ಚುವ ಮೂಲಕ ಶಾಲೆಯ ಅಂದವನ್ನು ಹೆಚ್ಚಿಸುವ ಕಾರ್ಯ ಕೈಗೊಳ್ಳಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಗುರುಗಳು ಸಂಶುದ್ದೀನ್ ಅವರು ಹಲವು ವರ್ಷಗಳ ಹಿಂದೆ ಬಣ್ಣವನ್ನು ಕಂಡಿದ್ದ ನಮ್ಮ ಶಾಲೆ ಇಂದು ಅಭಿನಂದನ್ ಸಂಸ್ಥೆಯ ಈ ಸ್ವಚ್ಛತಾ ಅಭಿಯಾನದ ಮೂಲಕ ಮತ್ತೆ ಮರು ಜೀವವನ್ನು ಪಡೆದಂತಾಗಿದೆ ಈ ರೀತಿಯ ಶಾಲೆಯ ಅಂದ ಚಂದವನ್ನು ಹೆಚ್ಚಿಸಿದ ಅಭಿನಂದನ್ ಸಂಸ್ಥೆಗೆ, ಸಂಡೇ ಫಾರ್ ಸೋಶಿಯಲ್ ವರ್ಕ್ ಅಭಿಯಾನಕ್ಕೆ ಹಾಗೂ ಈ ಅಭಿಯಾನದಲ್ಲಿ ಪಾಲ್ಗೊಂಡ ಎಲ್ಲಾ ಸ್ವಯಂಸೇವಕರಿಗೆ ತುಂಬು ಹೃದಯದ ಧನ್ಯವಾದಗಳು. ಅಭಿಯಾನದ ಕೀರ್ತಿ ಇನ್ನೂ ಉತ್ತರೋತ್ತರವಾಗಿ ಹರಡಲಿ ಎಂದು ಅರಸವೆ ಎಂದರು.

ಇದೇ ಸಂದರ್ಭದಲ್ಲಿ ಶಿಕ್ಷಕರಾದ ಸೋಮಶೇಖರ್ ಹಾದಿಮನಿ, ಬೈಲಗುಡ್ಡ ಗ್ರಾಮದ ವೀರಭದ್ರಪ್ಪ, ಅಮರೇಶ್ ನಾಯಕ್, ಶಿವರಾಜ್ ಅಭಿನಂದನ್ ಸಂಸ್ಧೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಸದಸ್ಯರಾದ ಜಾಫರ್ ಮಿಯಾ , ಮಲ್ಲಿಕಾರ್ಜುನ ಬಡಿಗೇರ್, ರವಿಚಂದ್ರ, ಬಸಲಿಂಗಪ್ಪ ಬಾದರ್ಲಿ, ಕಿಶೋರ್ ಹಾಗೂ ಗ್ರಾಮದ ಯುವಕರು ಉಪಸ್ಥಿತರಿದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ