ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಯಚೂರು ಜಿಲ್ಲೆಯಲ್ಲಿ 32 ಸುಮೊಟು ಪ್ರಕರಣ ದಾಖಲು: ಮಾನವ ಹಕ್ಕುಗಳ ಆಯೋಗ

Advertisement

ರಾಯಚೂರು ಜಿಲ್ಲೆಯಲ್ಲಿ 32 ಸುಮೊಟು ಪ್ರಕರಣ ದಾಖಲು: ಮಾನವ ಹಕ್ಕುಗಳ ಆಯೋಗ

Advertisement

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಅವರಿಂದ ಪತ್ರಿಕಾಗೋಷ್ಠಿ

ರಾಯಚೂರು, ಮಾರ್ಚ್ 26: ರಾಯಚೂರು ಜಿಲ್ಲೆಯಲ್ಲಿ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಕುಂದುಕೊರತೆಗಳ ವರದಿಗಳನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಒಟ್ಟು 32 ಸುಮೊಟು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್ ಭಟ್ ತಿಳಿಸಿದ್ದಾರೆ.

ಮಾರ್ಚ್ 25ರಿಂದ ರಾಯಚೂರು ಪ್ರವಾಸದಲ್ಲಿರುವ ಅವರು, ಮಾರ್ಚ್ 26ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಾರ್ಚ್ 26ರಂದು ನಡೆದ ವಿಚಾರಣೆಯಲ್ಲಿ 32 ಸುಮೊಟು ಪ್ರಕರಣಗಳ ಜೊತೆಗೆ ಆಯೋಗದಲ್ಲಿ ಈಗಾಗಲೇ ದಾಖಲಾದ 27 ದೂರುಗಳನ್ನು ಸೇರಿಸಿ ಒಟ್ಟು 59 ಪ್ರಕರಣಗಳನ್ನು ಪರಿಶೀಲಿಸಲಾಗಿದೆ. ಕೆಲವು ಪ್ರಕರಣಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ವರದಿ ಕೋರಲಾಗಿದೆ ಎಂದು ತಿಳಿಸಿದರು.

ಮಾರ್ಚ್ 25ರಂದು ರಾಯಚೂರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಲಾಗಿದೆ. ಅಲ್ಲದೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳನ್ನು ಕೂಡ ಸಂಗ್ರಹಿಸಲಾಗಿದೆ. ಈ ಕುರಿತು ಸಭೆಯಲ್ಲಿ ಅಧಿಕಾರಿಗಳಿಂದ ಸ್ಪಷ್ಟನೆ ಪಡೆಯಲಾಗಿದೆ ಎಂದು ಹೇಳಿದರು.

ಇನ್ನು ರಾಜ್ಯ ಮಟ್ಟದಲ್ಲಿ 2022ರಿಂದ ಸುಮಾರು 8000 ಮಾನವ ಹಕ್ಕುಗಳ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಬಹುತೇಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಇನ್ನೂ ಸುಮಾರು 3600 ಪ್ರಕರಣಗಳು ಬಾಕಿ ಇವೆ. ಪ್ರತಿಮಾಸ ಸರಾಸರಿ 600ರಷ್ಟು ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿದ್ದು, ಒಂದು ದೂರು ವಿಲೇವಾರಿಗೆ ಕನಿಷ್ಠ ಐದಾರು ತಿಂಗಳು ಸಮಯ ಬೇಕಾಗುತ್ತದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಆಯೋಗದ ನ್ಯಾಯಿಕ ಸದಸ್ಯರಾದ ಎಸ್. ಕೆ. ವಂಟಿಗೋಡಿ ಉಪಸ್ಥಿತರಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್