ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಆರೋಪ: ₹39,600 ಡ್ರಾ ಪ್ರಕರಣಕ್ಕೆ ಹೊಸ ತಿರುವು

ಐದು ತಿಂಗಳಾದರೂ ದೂರು ದಾಖಲಾಗಿಲ್ಲ; ಚೆಕ್ ಲೀಫ್ ಕಳ್ಳತನದ ಬಗ್ಗೆ ಹಲವು ಪ್ರಶ್ನೆಗಳು

Advertisement

ತಿಡಿಗೋಳ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಮಾಡಿ ₹39,600 ಡ್ರಾ ಆರೋಪ: ಐದು ತಿಂಗಳಾದರೂ ದೂರು ದಾಖಲಾಗದಿರುವುದು ಅನುಮಾನಕ್ಕೆ ಕಾರಣ

Advertisement

ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮ ಪಂಚಾಯಿತಿಯಲ್ಲಿ ಚೆಕ್ ಬುಕ್ ಕಳ್ಳತನ ಮಾಡಿ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (PDO) ನಕಲಿ ಸಹಿ ಬಳಸಿ ₹39,600 ಹಣ ಡ್ರಾ ಮಾಡಿರುವ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿದ್ಧಪಡಿಸಿರುವ ದೂರು ಪತ್ರದ ಪ್ರಕಾರ, ತಿಡಿಗೋಳ ಗ್ರಾಮ ಪಂಚಾಯಿತಿಯ "ಗ್ರಾಮ ಪಂಚಾಯಿತಿ ನಿಧಿ" ಬ್ಯಾಂಕ್ ಖಾತೆಯಿಂದ ಎರಡು ಚೆಕ್‌ಗಳ ಮೂಲಕ ತಲಾ ₹19,800ರಂತೆ ಒಟ್ಟು ₹39,600 ಹಣ ಡ್ರಾ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.

news_1780037113_0_501.webp

ದೂರು ಪತ್ರದಲ್ಲಿ, ಒಂದು ಚೆಕ್ ಖಾಸಗಿ ಸಂಸ್ಥೆಯ ಹೆಸರಿನಲ್ಲಿ ಹಾಗೂ ಮತ್ತೊಂದು ಚೆಕ್ ಖಾಸಗಿ ವ್ಯಕ್ತಿಯ ಹೆಸರಿನಲ್ಲಿ ಹಣ ಡ್ರಾ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದ್ದು, ಈ ಎರಡೂ ಚೆಕ್‌ಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ನೀಡಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ, ಗ್ರಾಮ ಪಂಚಾಯಿತಿ ಕಚೇರಿಯಲ್ಲಿದ್ದ ಚೆಕ್ ಬುಕ್‌ನ ಚೆಕ್ ಲೀಫ್‌ಗಳನ್ನು ಕಳ್ಳತನ ಮಾಡಿ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಹಿಗಳನ್ನು ನಕಲು ಮಾಡಿ ಹಣ ಡ್ರಾ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ.

ಆದರೆ ಪ್ರಕರಣದಲ್ಲಿ ಮತ್ತೊಂದು ಕುತೂಹಲಕಾರಿ ಅಂಶ ಬೆಳಕಿಗೆ ಬಂದಿದೆ. ಈ ಕುರಿತು ತುರುವಿಹಾಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದಾಗ, ಇಲ್ಲಿಯವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದೂರು ಅಧಿಕೃತವಾಗಿ ದಾಖಲಾಗಿಲ್ಲ ಎಂದು ತಿಳಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ. ಇದರಿಂದ ಹಲವು ಪ್ರಶ್ನೆಗಳು ಉದ್ಭವಿಸಿವೆ. ಘಟನೆ ನಡೆದಿದ್ದು 2025ರ ಡಿಸೆಂಬರ್ ತಿಂಗಳಲ್ಲಿ ಎನ್ನಲಾಗುತ್ತಿದ್ದು, ಸುಮಾರು ಐದು ತಿಂಗಳಿಗೂ ಹೆಚ್ಚು ಸಮಯ ಕಳೆದಿದೆ. ಹಾಗಿದ್ದರೆ ಈ ವಿಚಾರ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ಈಗ ಬಂದಿದೆಯೇ? ಅಥವಾ ಮೊದಲೇ ತಿಳಿದಿದ್ದರೂ ದೂರು ಸಲ್ಲಿಸಲು ವಿಳಂಬವಾಗಿದೆಯೇ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

news_1778142080_0_556.webp

ಇನ್ನೊಂದೆಡೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನೆ ನಡೆದಿರುವುದು ನಿಜವಾಗಿದ್ದು, ದೂರು ದಾಖಲಿಸಲು ಮುಂದಾಗಿದ್ದೇವೆ ಎಂದು ಹೇಳಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹಾಗಾದರೆ ದೂರು ಇನ್ನೂ ಯಾಕೆ ದಾಖಲಾಗಿಲ್ಲ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸಿದೆ. ಇದೇ ವೇಳೆ, ಗ್ರಾಮ ಪಂಚಾಯಿತಿ ಕಚೇರಿಯಲ್ಲಿದ್ದ ಚೆಕ್ ಲೀಫ್‌ಗಳು ಹೊರಗಡೆ ಹೇಗೆ ಬಂದವು? ಕಚೇರಿಯ ದಾಖಲೆಗಳ ಮೇಲಿನ ಮೇಲ್ವಿಚಾರಣೆ ಹೇಗಿತ್ತು? ನಕಲಿ ಸಹಿ ಮಾಡಿದವರು ಯಾರು? ಬ್ಯಾಂಕ್ ಮಟ್ಟದಲ್ಲಿ ಪರಿಶೀಲನೆ ನಡೆದಿತ್ತೇ? ಹಣ ಪಡೆದವರು ಯಾರು? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

news_1778905892_0_440.webp

ಪ್ರಕರಣದ ಬಗ್ಗೆ ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಮೇಲಾಧಿಕಾರಿಗಳ ಗಮನಕ್ಕೆ ವಿಷಯ ಬಂದಿದೆಯೇ ಎಂಬುದೂ ಸ್ಪಷ್ಟವಾಗಿಲ್ಲ. ಸರ್ಕಾರಿ ಕಚೇರಿಯಲ್ಲಿದ್ದ ಚೆಕ್‌ಗಳನ್ನು ದುರುಪಯೋಗಪಡಿಸಿಕೊಂಡು ಹಣ ಡ್ರಾ ಮಾಡಲಾಗಿದೆ ಎಂಬ ಆರೋಪ ಅತ್ಯಂತ ಗಂಭೀರವಾಗಿದ್ದು, ಈ ಪ್ರಕರಣ "ಸರ್ಕಾರಿ ನಿಧಿಗೆ ಸಂಬಂಧಿಸಿದ ಗಂಭೀರ ಆರೋಪವಾಗಿರುವುದರಿಂದ ಪ್ರಕರಣದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕೆಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ."

news_1780027666_0_213.webp

ಸಾರ್ವಜನಿಕರ ತೆರಿಗೆ ಹಣ ಮತ್ತು ಸರ್ಕಾರಿ ನಿಧಿ ಸುರಕ್ಷಿತವಾಗಿರಬೇಕು. ಆದ್ದರಿಂದ ಸಂಬಂಧಪಟ್ಟ ಮೇಲಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ನಕಲಿ ಸಹಿ ಮಾಡಿ ಹಣ ಡ್ರಾ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ, ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧವೂ ಸೂಕ್ತ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಪ್ರಕರಣದ ಕುರಿತು ಪೊಲೀಸ್ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಆಡಳಿತ ಸ್ಪಷ್ಟನೆ ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಆರೋಪ: ₹39,600 ಡ್ರಾ ಪ್ರಕರಣಕ್ಕೆ ಹೊಸ ತಿರುವುಜೋಳ ಖರೀದಿ ಸ್ಥಗಿತ: ಜಿಲ್ಲಾಧಿಕಾರಿಗಳಿಗೆ ರೈತರ ತುರ್ತು ಮನವಿಅಪಪ್ರಚಾರಕ್ಕೆ ಕಿವಿಗೊಡಬೇಡಿ: ಆರ್. ಸಿದ್ದನಗೌಡ ತುರವಿಹಾಳ ಮನವಿಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಎನ್. ಸತ್ಯನಾರಾಯಣ ಶೆಟ್ಟಿ ಸಿಂಧನೂರಿಗೆ ಡಬಲ್ ಧಮಾಕಾ..? ಇಬ್ಬರು ಬಾದರ್ಲಿಗಳಿಗೆ ಸಚಿವ ಸ್ಥಾನ ಸಿಗುತ್ತಾ..?“ಸಿದ್ದರಾಮಯ್ಯ ವ್ಯಕ್ತಿ ಅಲ್ಲ… ಒಂದು ಶಕ್ತಿ”“ಸಿದ್ದು ಸರ್ಕಾರ ಪತನ..! ಇಂದಿನಿಂದ ಎಲ್ಲಾ ಸಚಿವರು ಮಾಜಿ ಸಚಿವರು”ಬುಕ್ಕನಟ್ಟಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಬಸವನಗೌಡ ಬಾದರ್ಲಿಗೆ ಸಚಿವ ಸ್ಥಾನ ಫಿಕ್ಸ್ ಆಗ್ತಿದೆಯಾ..?8 ವರ್ಷದ ಮಕ್ಕಳಿಗೆ ಮುಟ್ಟು..! ಬಾಲ್ಯ ಕಸಿದುಕೊಳ್ಳುತ್ತಿರುವ ಪಿಜ್ಜಾ-ಬರ್ಗರ್ ಸಂಸ್ಕೃತಿ..?ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳುವಂತೆ ಮನವಿಸರಕಾರಿ ನೌಕರಿ,ಸಂಬಳ ಬೇಕು ಆದರೆ ನಿಯಮ ಬೇಡವಾ...?ಪಿಸ್ತೂಲ್‌ನೊಂದಿಗೆ ಓಡಾಡುತ್ತಿರುವ ಉಪಲೋಕಾಯುಕ್ತ ಬಿ.ವೀರಪ್ಪ“ಕಾಕ್‌ರೋಚ್ ಜನತಾ ಪಾರ್ಟಿ” ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ಸಹನಾ ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಸಾಧನೆ