ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆಗೆ 682 ವಿದ್ಯಾರ್ಥಿಗಳು ಗೈರು

ಜಿಲ್ಲೆಯ 101 ಕೇಂದ್ರಗಳಲ್ಲಿ 29,785 ವಿದ್ಯಾರ್ಥಿಗಳ ಹಾಜರಾತಿ

ರಾಯಚೂರು, ಮಾರ್ಚ್ 31:
ಜಿಲ್ಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಒಟ್ಟು 682 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಂಗಳವಾರ ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ಒಟ್ಟು 29,785 ವಿದ್ಯಾರ್ಥಿಗಳು ಹಾಜರಾಗಿದ್ದು, ಕೆಲವರು ಗೈರಾಗಿರುವುದು ಗಮನಾರ್ಹವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕುವಾರು ವಿವರಗಳ ಪ್ರಕಾರ, ದೇವದುರ್ಗ ತಾಲ್ಲೂಕಿನಲ್ಲಿ 3,964 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ಮಂದಿ ಗೈರಾಗಿದ್ದಾರೆ. ಲಿಂಗಸುಗೂರು ತಾಲ್ಲೂಕಿನಲ್ಲಿ 6,036 ವಿದ್ಯಾರ್ಥಿಗಳು ಹಾಜರಾಗಿದ್ದು, 110 ಮಂದಿ ಗೈರಾಗಿದ್ದಾರೆ. ಇನ್ನೂ ಮಾನ್ವಿ ತಾಲ್ಲೂಕಿನಲ್ಲಿ 5,360 ವಿದ್ಯಾರ್ಥಿಗಳು ಹಾಜರಾಗಿದ್ದು, 165 ಮಂದಿ ಗೈರಾಗಿದ್ದಾರೆ. ರಾಯಚೂರು ತಾಲ್ಲೂಕಿನಲ್ಲಿ 8,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 235 ಮಂದಿ ಗೈರಾಗಿದ್ದಾರೆ.

ಸಿಂಧನೂರು ತಾಲ್ಲೂಕಿನಲ್ಲಿ 5,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ಮಂದಿ ಗೈರಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಪರೀಕ್ಷೆಗಳು ಶಾಂತಿಯುತವಾಗಿ ನಡೆದಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ವಿಷದ ಗಾಳಿಯಲ್ಲಿ ನರಳುತ್ತಿರುವ ಹಿರೇಬಗನಾಳ!ಏಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆಗೆ 682 ವಿದ್ಯಾರ್ಥಿಗಳು ಗೈರುಭಗವಾನ್ ಮಹಾವೀರರ ಶಾಂತಿ, ಸೌಹಾರ್ಧತೆ ಸಂದೇಶಗಳು ಇಂದಿಗೂ ಪ್ರಸ್ತುತ: ಡಾ. ಹಂಪಣ್ಣ ಸಜ್ಜನ್ಏಪ್ರಿಲ್–ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆಜೋಳ ಖರೀದಿ ಕೇಂದ್ರಗಳಲ್ಲಿ ಅಕ್ರಮಗಳ ಆರ್ಭಟ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಉಸಿರೇ ವಿಷವಾಗಿದೆಯೇ? ಹಿರೇಬಗನಾಳ ಕಣ್ಣೀರುತೂಕದಲ್ಲಿ ತಂತ್ರ – ರೈತರ ಮೇಲೆ ದೋಚಾಟದ ಜಾಲ! ಖರೀದಿ ಕೇಂದ್ರದ ಅಕ್ರಮ ಬಯಲು!ಅಪಶಕುನವೆಂದು ಹೆದರಿಸಿದ ಜನ್ಮ – “ಲಕ್ಷ್ಮಿ”ಯಾಗಿ ಬೆಳೆದ ಜೀವನಮನ್ ಕೀ ಬಾತ್ ವೀಕ್ಷಣೆಗಾಗಿ ಬಿಜೆಪಿ ಕಾರ್ಯಕರ್ತರಿಗೆ ಸೂಚನೆಟ್ರಾಕ್ಟರ್ ಪಲ್ಟಿಯಾಗಿ ಕೆರೆಗೆ ಬಿದ್ದು ಇಬ್ಬರ ದುರ್ಮರಣಗಣ್ಯರ ‘ಇನ್ನಿಲ್ಲ’ ಫೇಕ್ ಪೋಸ್ಟ್ ವೈರಲ್ ಐಪಿಎಲ್ ಆರಂಭದೊಂದಿಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ಗರಿಗೆದರಿಕೆ“ಜ್ವರಕ್ಕೆ ಇಂಜೆಕ್ಷನ್… 9ನೇ ತರಗತಿ ಬಾಲಕಿಯ ಸಾವು!”“ಸಿಂಧನೂರಿನಲ್ಲಿ ಭ್ರಷ್ಟಾಚಾರ ಸ್ಫೋಟ: FSSAI ಲಂಚದಾಟದಿಂದ ಹುದ್ದೆ ಗೊಂದಲ!”