ರಾಯಚೂರು, ಮಾರ್ಚ್ 31:
ಜಿಲ್ಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಒಟ್ಟು 682 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಂಗಳವಾರ ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ಒಟ್ಟು 29,785 ವಿದ್ಯಾರ್ಥಿಗಳು ಹಾಜರಾಗಿದ್ದು, ಕೆಲವರು ಗೈರಾಗಿರುವುದು ಗಮನಾರ್ಹವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕುವಾರು ವಿವರಗಳ ಪ್ರಕಾರ, ದೇವದುರ್ಗ ತಾಲ್ಲೂಕಿನಲ್ಲಿ 3,964 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ಮಂದಿ ಗೈರಾಗಿದ್ದಾರೆ. ಲಿಂಗಸುಗೂರು ತಾಲ್ಲೂಕಿನಲ್ಲಿ 6,036 ವಿದ್ಯಾರ್ಥಿಗಳು ಹಾಜರಾಗಿದ್ದು, 110 ಮಂದಿ ಗೈರಾಗಿದ್ದಾರೆ. ಇನ್ನೂ ಮಾನ್ವಿ ತಾಲ್ಲೂಕಿನಲ್ಲಿ 5,360 ವಿದ್ಯಾರ್ಥಿಗಳು ಹಾಜರಾಗಿದ್ದು, 165 ಮಂದಿ ಗೈರಾಗಿದ್ದಾರೆ. ರಾಯಚೂರು ತಾಲ್ಲೂಕಿನಲ್ಲಿ 8,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 235 ಮಂದಿ ಗೈರಾಗಿದ್ದಾರೆ.
ಸಿಂಧನೂರು ತಾಲ್ಲೂಕಿನಲ್ಲಿ 5,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ಮಂದಿ ಗೈರಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಪರೀಕ್ಷೆಗಳು ಶಾಂತಿಯುತವಾಗಿ ನಡೆದಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.









