ಸಿಂಧನೂರು, ಮೇ 02: BB NEWS KANNADA
ಬಸನಗೌಡ ಫೌಂಡೇಶನ್ ವತಿಯಿಂದ ಮೇ 03, 2026 ರ ಭಾನುವಾರ ಭವ್ಯ ಹಾಗೂ ಅರ್ಥಪೂರ್ಣ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸಾವಿರಾರು ಜನರ ಸಮ್ಮುಖದಲ್ಲಿ ವಿಶೇಷ ಸಮಾರಂಭ ಜರುಗಲಿದೆ ಎಂದು ಫೌಂಡೇಶನ್ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದಲ್ಲಿ “ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ”, 5001 ಮುತ್ತೈದೆಯರಿಗೆ ಉಡಿ ತುಂಬುವ ಮಹೋತ್ಸವ ಹಾಗೂ ಜನಪ್ರಿಯ ನಾಯಕರು ಮತ್ತು ವಿಧಾನಪರಿಷತ್ ಶಾಸಕರಾದ ಶ್ರೀ ಬಸನಗೌಡ ಬಾದರ್ಲಿ ಅವರು ಶಾಸಕರಾದ ನಂತರ ಒಂದು ವರ್ಷದ ಸಾಧನೆಗಳ ಕುರಿತ “ಸಾಧನಾ ಕೃತಿ ಅನಾವರಣ” ಕಾರ್ಯಕ್ರಮ ನಡೆಯಲಿದೆ.
ಈ ಭವ್ಯ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಕರುನಾಡ ಅಭಿನಯ ಚಕ್ರವರ್ತಿ, ಖ್ಯಾತ ನಟರಾದ Kichcha Sudeep ಅವರು ಮುಖ್ಯ ಆಕರ್ಷಣೆಯಾಗಿ ಆಗಮಿಸಲಿದ್ದು, ಅಭಿಮಾನಿಗಳು ಹಾಗೂ ಸಾರ್ವಜನಿಕರಲ್ಲಿ ಅಪಾರ ಉತ್ಸಾಹ ಮನೆಮಾಡಿದೆ.
ಸಾಮಾಜಿಕ ಬದ್ಧತೆ, ಜನಸೇವೆ ಮತ್ತು ಸಂಸ್ಕೃತಿ ಸಂರಕ್ಷಣೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಸಾಮೂಹಿಕ ವಿವಾಹದ ಮೂಲಕ ಅನೇಕ ಬಡ ಕುಟುಂಬಗಳಿಗೆ ನೆರವಾಗುವ ಕಾರ್ಯವನ್ನು ಫೌಂಡೇಶನ್ ಕೈಗೊಂಡಿದ್ದು, ಮುತ್ತೈದೆಯರಿಗೆ ಉಡಿ ತುಂಬುವ ಮೂಲಕ ಸಂಪ್ರದಾಯ ಮತ್ತು ಮಹಿಳಾ ಗೌರವಕ್ಕೆ ವಿಶೇಷ ಮಹತ್ವ ನೀಡಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಶ್ರೀ ಬಸನಗೌಡ ಬಾದರ್ಲಿ ಅವರ ಒಂದು ವರ್ಷದ ಶಾಸಕೀಯ ಸಾಧನೆಗಳನ್ನು ಒಳಗೊಂಡ ಕೃತಿ ಅನಾವರಣಗೊಳ್ಳಲಿದ್ದು, ವಿವಿಧ ಗಣ್ಯರು, ರಾಜಕೀಯ ನಾಯಕರು, ಧಾರ್ಮಿಕ ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬಸನಗೌಡ ಫೌಂಡೇಶನ್ ಮನವಿ ಮಾಡಿದೆ.









