ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರ

ಸಾರ್ವಜನಿಕ ಆರೋಗ್ಯ ಸೇವೆ ಬಲವರ್ಧನೆಗೆ ಆದ್ಯತೆ; ಆರೋಗ್ಯ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಬದ್ಧತೆ

Advertisement

ರಾಯಚೂರು, ಜು.17: ರಾಯಚೂರು ಜಿಲ್ಲೆಯ ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ)ಯಾಗಿ ಡಾ. ನಂದಿತಾ ಎಂ.ಎನ್. ಅವರು ಶುಕ್ರವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುರೇಂದ್ರ ಬಾಬು ಅವರಿಂದ ಅಧಿಕಾರವನ್ನು ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಡಾ. ನಂದಿತಾ ಎಂ.ಎನ್., ಜಿಲ್ಲೆಯ ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಇನ್ನಷ್ಟು ಬಲಪಡಿಸುವುದು ಹಾಗೂ ರಾಜ್ಯ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ತಮ್ಮ ಪ್ರಮುಖ ಆದ್ಯತೆಯಾಗಲಿದೆ ಎಂದು ತಿಳಿಸಿದರು.

Advertisement

https://www.instagram.com/reel/Da4-Ttuybf6/?igsh=dGRybHN2NmhqaDNt

ಜಿಲ್ಲೆಯ ತಾಯಿ ಮತ್ತು ಶಿಶು ಆರೋಗ್ಯ ಸೇವೆ, ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಸಾರ್ವತ್ರಿಕ ಲಸಿಕಾ ಅಭಿಯಾನ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು. ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ, ಜನಸ್ನೇಹಿ ಮತ್ತು ಪರಿಣಾಮಕಾರಿ ಆರೋಗ್ಯ ಸೇವೆಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

news_1784302597_0_240.webp

ಈ ಸಂದರ್ಭದಲ್ಲಿ ಇಲಾಖೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯರು ಹಾಗೂ ಸಿಬ್ಬಂದಿ ನೂತನ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಭಿನಂದಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್ಮುಂಗಾರು ಹಂಗಾಮಿನ ಬೆಳೆ ವಿಮೆ ಹಾಗೂ ರಸಗೊಬ್ಬರ ದರಗಳ ಪೋಸ್ಟರ್ ಬಿಡುಗಡೆರಾಯಚೂರಿನಲ್ಲಿ ಜುಲೈ 10ರಂದು ಜಪ್ತಿ ಆಹಾರ ಧಾನ್ಯಗಳ ಬಹಿರಂಗ ಹರಾಜುಅಧಿಕಾರಿಗಳ ಮೇಲೆ ಕುಟುಂಬ ರಾಜಕಾರಣ?