ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಚಿನ್ನದ ಪದಕ ವಿಜೇತ ಶ್ವೇತಾ ಮೇಟಿ BSC ಕಂಪ್ಯೂಟರ್ ಸೈನ್ಸ್‌ನಲ್ಲಿ 7ನೇ ರಾಂಕ್

ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್‌ನಲ್ಲಿ 7ನೇ ರಾಂಕ್: ಸಿಂಧನೂರಿನ ವಿದ್ಯಾರ್ಥಿನಿ ಶ್ವೇತಾ ಮೇಟಿ ಚಿನ್ನದ ಪದಕ ವಿಜೇತೆ

BB NEWS KANNADA

ಏಪ್ರಿಲ್ 18 ಸಿಂಧನೂರ್ : ವಿಜಯಪುರದಲ್ಲಿರುವ ವು 2024-25ನೇ ಸಾಲಿನ ಘಟಿಕೋತ್ಸವದ ರ್ಯಾಂಕ್ ಪಟ್ಟಿಯನ್ನು ಪ್ರಕಟಿಸಿದ್ದು, ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸಿಂಧನೂರಿನ ಪಾಟೀಲ್ ಕಾಲೇಜಿನ ವಿದ್ಯಾರ್ಥಿನಿ ಕು. ಶ್ವೇತಾ ಮೇಟಿ 7ನೇ ರಾಂಕ್ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಮೂಲತಃ ದ ಚಳ್ಳೂರು ಗ್ರಾಮದ ನಿವಾಸಿಯಾದ ಶ್ವೇತಾ ಮೇಟಿ ಅವರು ದೇವರೆಡ್ಡಿ ಮೇಟಿ ಅವರ ಪುತ್ರಿಯಾಗಿದ್ದು, ತಮ್ಮ ಶ್ರಮ ಮತ್ತು ಪ್ರತಿಭೆಯಿಂದ ಈ ಸಾಧನೆ ಮಾಡಿದ್ದಾರೆ.

2026 ಏಪ್ರಿಲ್ 21ರಂದು ವಿಜಯಪುರದಲ್ಲಿ ನಡೆಯಲಿರುವ ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರು ಶ್ವೇತಾ ಮೇಟಿ ಅವರಿಗೆ ಚಿನ್ನದ ಪದಕ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶಿಕ್ಷಣ ಸಂಸ್ಥೆ ವತಿಯಿಂದ ಶುಭಕೋರಿರುವದು
ಶಿಕ್ಷಣ ಸಂಸ್ಥೆ ವತಿಯಿಂದ ಶುಭಕೋರಿರುವದು

 

🎓 ಪಾಟೀಲ್ ಕಾಲೇಜಿಗೆ ಹೆಮ್ಮೆ ತಂದ ವಿದ್ಯಾರ್ಥಿನಿ

ಗೆ ಸೇರಿರುವ ಪಾಟೀಲ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾದ ಶ್ವೇತಾ ಮೇಟಿ ಅವರು ಬಿ.ಎಸ್.ಸಿ ಪದವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಹಪಾಠಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

news_1776481589_0_283.webp

 

ಪ್ರತಿಭೆಗೆ ಶ್ರಮವೇ ಮಂತ್ರ

ಗ್ರಾಮೀಣ ಪ್ರದೇಶದಿಂದ ಬಂದ ವಿದ್ಯಾರ್ಥಿನಿಯಾಗಿದ್ದರೂ, ನಿರಂತರ ಪರಿಶ್ರಮ ಮತ್ತು ಗುರಿ ಸಾಧನೆಯ ಮನೋಭಾವದಿಂದ ಶ್ವೇತಾ ಮೇಟಿ ಅವರು ಈ ಸಾಧನೆ ಮಾಡಿದ್ದಾರೆ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ.

“ಪ್ರತಿಭೆಗೆ ಅವಕಾಶ ಸಿಕ್ಕರೆ ಗ್ರಾಮದಿಂದಲೂ ಚಿನ್ನದ ಪದಕ ಗೆಲ್ಲಬಹುದು” ಎಂಬುದಕ್ಕೆ ಶ್ವೇತಾ ಮೇಟಿ ಜೀವಂತ ಉದಾಹರಣೆ.

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಚಿನ್ನದ ಪದಕ ವಿಜೇತ ಶ್ವೇತಾ ಮೇಟಿ BSC ಕಂಪ್ಯೂಟರ್ ಸೈನ್ಸ್‌ನಲ್ಲಿ 7ನೇ ರಾಂಕ್ಬಸ್–ಕಾರ್ ಡಿಕ್ಕಿಗೆ 6 ಮಂದಿ ಸಜೀವ ದಹನ – ನಿರ್ಲಕ್ಷ್ಯ ರಸ್ತೆಗೆ ಮತ್ತೆ ಬಲಿ!ಮರಕ್ಕೆ ಕಾರು ಡಿಕ್ಕಿ: ಸಿಪಿಐ ರಘುನಾಥ್ ಸ್ಥಳದಲ್ಲೇ ದುರ್ಮರಣಗುತ್ತಿಗೆ ಪದ್ಧತಿ ವಿರೋಧಿಸಿ ಆಕ್ರೋಶ“ಕತ್ತು ಕೊಯ್ಯುವುದನ್ನು ನಿಲ್ಲಿಸಿ” – ಸರ್ಕಾರದ ವಿರುದ್ಧ ಆಕ್ರೋಶವಿಠಲಪುರದಲ್ಲಿ ಅಂಬೇಡ್ಕರ್ ಜಯಂತಿ ಉತ್ಸಾಹಭರಿತ ಆಚರಣೆಸಿಂಧನೂರು ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮೂವರ ಬಂಧನಮನುಸ್ಮೃತಿಯ ಕತ್ತಲೆಯಿಂದ ಸಂವಿಧಾನದ ಬೆಳಕಿನೆಡೆಗೆ ಅಂಬೇಡ್ಕರ್ ಎಂಬ ಯುಗಪುರುಷ ಮಸ್ಕಿಯಲ್ಲಿ ಬಿಜೆಪಿ V/S ಬಿಜೆಪಿ: ಅಭ್ಯರ್ಥಿ ಗೊಂದಲ, ಒಳಜಗಳ ಬಹಿರಂಗಕೊಪ್ಪಳದಲ್ಲಿ ಸದ್ದು ಮಾಡಿದ ಪ್ರಕರಣ: ವಿದ್ಯಾರ್ಥಿನಿಯರ ವಿಡಿಯೋಗಳ ಆರೋಪಕ್ಕೆ ಬೆಚ್ಚಿಬಿದ್ದ ಜನತೆಪ್ರೀತಿಯ ಹೆಸರಲ್ಲಿ ಮೋಸ: ಮದುವೆ ನಂಬಿಸಿ ಯುವತಿಗೆ ದ್ರೋಹ, ಪ್ರಕರಣ ದಾಖಲುಲೋಕಾಯುಕ್ತ ದಾಳಿ: ₹1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಮುಖ್ಯಾಧಿಕಾರಿ ಬಂಧನಲಂಚ ಪಡೆದ ಪಿ.ಡಿ.ಓಗೆ ಜೈಲು ಶಿಕ್ಷೆ: 7 ವರ್ಷಗಳ ಕಾರಾವಾಸ, ₹75 ಸಾವಿರ ದಂಡಮೊಬೈಲ್ ದಾಸರಾಗಬೇಡಿ, ವಿದ್ಯಾವಂತರಾಗಿ – ಡಿ.ವೈ.ಎಸ್.ಪಿ ಚಂದ್ರಶೇಖರ್ ಕರೆಪಿಯುಸಿ ಫಲಿತಾಂಶದಲ್ಲಿ ಯಡವಟ್ಟು 600 ಕ್ಕೆ 603 ಅಂಕ! ಕರೆಗೂ ಸ್ಪಂದಿಸದ ಅಧಿಕಾರಿ, ಲಕ್ಷಾಂತರ ಅಕ್ರಮ ಆರೋಪ – ರೌಡಕುಂದದಲ್ಲಿ ಗದ್ದಲ