ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿ

ಉದ್ಯೋಗ ಖಾತ್ರಿ ಕಾರ್ಮಿಕನ ಸಾವಿನ ಪ್ರಕರಣ: ಪರಿಹಾರ ನೀಡದ ಗ್ರಾಮ ಪಂಚಾಯಿತಿಗೆ ನ್ಯಾಯಾಲಯದ ಬಿಗಿ ಕ್ರಮ

Advertisement

ಉದ್ಯೋಗ ಖಾತ್ರಿ ಕಾಮಗಾರಿ ವೇಳೆ ಕಾರ್ಮಿಕ ಸಾವು: ಪರಿಹಾರ ಹಣ ಪಾವತಿಸದ ಹಿನ್ನೆಲೆ ಗ್ರಾಮ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿ, ಸಿಂಧನೂರು ನ್ಯಾಯಾಲಯದ ಆದೇಶದ ಮೇರೆಗೆ ಕೆ. ಬಸಾಪುರ ಗ್ರಾಮ ಪಂಚಾಯಿತಿಯಲ್ಲಿ ಜಪ್ತಿ ಕಾರ್ಯಾಚರಣೆ

Advertisement

 

ಸಿಂಧನೂರು, ಜು. 14: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGS) ಕಾಮಗಾರಿ ವೇಳೆ ಸಂಭವಿಸಿದ್ದ ಕಾರ್ಮಿಕನ ಸಾವಿನ ಪ್ರಕರಣದಲ್ಲಿ ನ್ಯಾಯಾಲಯ ಆದೇಶಿಸಿದ ಪರಿಹಾರ ಮೊತ್ತವನ್ನು ಪಾವತಿಸದ ಹಿನ್ನೆಲೆಯಲ್ಲಿ ಕೆ. ಬಸಾಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿದ್ದ ಕಂಪ್ಯೂಟರ್, ಮಾನಿಟರ್, ಟೇಬಲ್, ಕುರ್ಚಿ ಸೇರಿದಂತೆ ವಿವಿಧ ಕಚೇರಿ ಸಾಮಗ್ರಿಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಮಂಗಳವಾರ ಜಪ್ತಿ ಮಾಡಲಾಯಿತು.

news_1779340187_0_802.webp

ಪ್ರಕರಣದ ವಿವರದಂತೆ, ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕೆ. ಬಸಾಪುರ ಗ್ರಾಮದ ನಿವಾಸಿ ಶಶಿಧರ್ ಎಂ.ಪಿ. ಅವರು 2019ರ ಏಪ್ರಿಲ್ 25ರಂದು ಉದ್ಯೋಗ ಖಾತ್ರಿ ಯೋಜನೆಯಡಿ ಗುಂಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡಿಹಾಳ ಗ್ರಾಮದ ಹೊಸಕೆರೆ ಕಾಮಗಾರಿಯಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿದ್ದರು. ಬೆಳಿಗ್ಗೆ ಸುಮಾರು 7.30 ಗಂಟೆ ವೇಳೆಗೆ ಕೆರೆಯಲ್ಲಿ ಮಣ್ಣು ತೆಗೆಯುವ ಸಂದರ್ಭದಲ್ಲಿ ಮೇಲ್ಭಾಗದ ಮಣ್ಣು ಏಕಾಏಕಿ ಕುಸಿದು ಶಶಿಧರ್ ಅವರ ಮೇಲೆ ಬಿದ್ದ ಪರಿಣಾಮ ಅವರು ಮಣ್ಣಿನಡಿ ಸಿಲುಕಿ ಉಸಿರುಗಟ್ಟಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದು, ಆಸ್ಪತ್ರೆಯ ವೈದ್ಯರು ಮರಣ ಹೊಂದಿರುವುದನ್ನು ದೃಢಪಡಿಸಿದ್ದರು.

news_1784034961_0_212.webp

ಈ ಘಟನೆಯ ನಂತರ ಮೃತ ಶಶಿಧರ್ ಅವರ ಪತ್ನಿ ರೇಖಾ ಅವರು ತಮ್ಮ ಪರ ವಕೀಲ ಎನ್. ರಾಮನಗೌಡ ಅವರ ಮೂಲಕ ಸಿಂಧನೂರಿನ ಮಾನ್ಯ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ECA No.01/2021 ಸಂಖ್ಯೆಯಡಿ ದಾಖಲಾದ ಅರ್ಜಿಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕೆ. ಬಸಾಪುರ ಗ್ರಾಮ ಪಂಚಾಯಿತಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

news_1783488946_0_647.webp

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ 2025ರ ಆಗಸ್ಟ್ 6ರಂದು ಅರ್ಜಿದಾರರ ಪರವಾಗಿ ತೀರ್ಪು ನೀಡಿ, ನ್ಯಾಯಾಲಯ ನಿಗದಿಪಡಿಸಿದ ಪರಿಹಾರ ಮೊತ್ತವನ್ನು ಪ್ರತಿವಾದಿಗಳು ಪಾವತಿಸುವಂತೆ ಆದೇಶಿಸಿತ್ತು. ಆದರೆ ನ್ಯಾಯಾಲಯದ ಆದೇಶದ ಹೊರತಾಗಿಯೂ ಪರಿಹಾರ ಮೊತ್ತ ಪಾವತಿಯಾಗದ ಹಿನ್ನೆಲೆಯಲ್ಲಿ ಮೃತರ ಪತ್ನಿ ರೇಖಾ ಅವರು EP Case No.17/2026 ಅಡಿಯಲ್ಲಿ ಡಿಕ್ರಿ ಜಾರಿಗಾಗಿ ಮರು ಅರ್ಜಿ ಸಲ್ಲಿಸಿದರು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯವು ಕೆ. ಬಸಾಪುರ ಗ್ರಾಮ ಪಂಚಾಯಿತಿ ವಿರುದ್ಧ ಜಪ್ತಿ ಆದೇಶ ಹೊರಡಿಸಿತು. ಅದರಂತೆ 2026ರ ಜುಲೈ 14ರಂದು ನ್ಯಾಯಾಲಯದ ಬೆಲಿಫ್ ಜೆ. ಅಮರೇಗೌಡ ವಂದಲಿ ಅವರು, ಅರ್ಜಿದಾರರ ಪರ ವಕೀಲರಾದ ಎನ್. ರಾಮನಗೌಡ ಹಾಗೂ ಹುಸೇನ್ ಬಾಷಾ ಅವರ ಸಮ್ಮುಖದಲ್ಲಿ, ಗ್ರಾಮ ಪಂಚಾಯಿತಿ ಸಿಬ್ಬಂದಿಯ ಉಪಸ್ಥಿತಿಯಲ್ಲಿ ಜಪ್ತಿ ಕಾರ್ಯಾಚರಣೆ ನಡೆಸಿದರು.

news_1781778738_0_399.webp

ಈ ವೇಳೆ ಪಂಚಾಯಿತಿ ಕಚೇರಿಯಲ್ಲಿದ್ದ ಕಂಪ್ಯೂಟರ್ ಸಿಪಿಯು, ಮಾನಿಟರ್, ಟೇಬಲ್‌ಗಳು, ಕುರ್ಚಿಗಳು, ಬ್ಯಾಟರಿ ಹಾಗೂ ಇತರ ಕಚೇರಿ ಸಾಮಗ್ರಿಗಳನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಲಾಯಿತು. ನ್ಯಾಯಾಲಯದ ಆದೇಶದಂತೆ ಪರಿಹಾರ ಮೊತ್ತ ಪಾವತಿಸುವವರೆಗೆ ಮುಂದಿನ ಕಾನೂನು ಪ್ರಕ್ರಿಯೆ ಮುಂದುವರಿಯಲಿದ್ದು, ಈ ಘಟನೆ ಸ್ಥಳೀಯ ಸಂಸ್ಥೆಗಳು ನ್ಯಾಯಾಲಯದ ಆದೇಶಗಳನ್ನು ಸಮಯಕ್ಕೆ ಸರಿಯಾಗಿ ಪಾಲಿಸುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸುವಂತಾಗಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್ಮುಂಗಾರು ಹಂಗಾಮಿನ ಬೆಳೆ ವಿಮೆ ಹಾಗೂ ರಸಗೊಬ್ಬರ ದರಗಳ ಪೋಸ್ಟರ್ ಬಿಡುಗಡೆರಾಯಚೂರಿನಲ್ಲಿ ಜುಲೈ 10ರಂದು ಜಪ್ತಿ ಆಹಾರ ಧಾನ್ಯಗಳ ಬಹಿರಂಗ ಹರಾಜುಅಧಿಕಾರಿಗಳ ಮೇಲೆ ಕುಟುಂಬ ರಾಜಕಾರಣ?ಸರ್ಕಾರಿ ಪಿಯುಸಿ ವಿದ್ಯಾರ್ಥಿ ನಿಲಯಕ್ಕೆ ಬಾಡಿಗೆ ಕಟ್ಟಡ ಅಗತ್ಯ – ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನ"ವೈದ್ಯೋ ನಾರಾಯಣೋ ಹರಿಃ" – ದೇವತ್ವದ ಪಂಜರದಲ್ಲಿ ಸಿಲುಕಿದ ಮಾನವೀಯತೆ!ಸಿಂಧನೂರಿನಲ್ಲಿ ಜಪ್ತಿ ಆಹಾರ ಧಾನ್ಯಗಳ ಬಹಿರಂಗ ಹರಾಜು ಜುಲೈ 02ಕ್ಕೆ