ಸಹನಾ ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಸಾಧನೆ
10 ವರ್ಷದ ಬಾಲಕನಿಗೆ ಯಶಸ್ವಿ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ
ಬಡ ರೋಗಿಗಳ ಪಾಲಿಗೆ ಆಶಾಕಿರಣವಾದ ಸಿಂಧನೂರಿನ ಸಹನಾ ಮಕ್ಕಳ ಆಸ್ಪತ್ರೆ
📍 ಸಿಂಧನೂರು | ವಿಶೇಷ ವರದಿ BB NEWS KANNADA
ಸಿಂಧನೂರಿನ ಸ್ಥಳೀಯ ಸಹನಾ ಮಕ್ಕಳ ಆಸ್ಪತ್ರೆ ಮತ್ತೊಮ್ಮೆ ತನ್ನ ವೈದ್ಯಕೀಯ ಸೇವೆಯ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ಹಲವು ವರ್ಷಗಳಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿರುವ ಆಸ್ಪತ್ರೆಯಲ್ಲಿ, ಇತ್ತೀಚೆಗೆ 10 ವರ್ಷದ ಬಾಲಕನಿಗೆ ಕಾಡುತ್ತಿದ್ದ ಅಪರೂಪದ ‘ಲಾಲಾರಸ ಗ್ರಂಥಿಯ ಗಡ್ಡೆ’ (Sialocele) ಸಮಸ್ಯೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ನಡೆದ ಈ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಪರಿಣಿತ ವೈದ್ಯರ ತಂಡ ಅತ್ಯಂತ ಯಶಸ್ವಿಯಾಗಿ ನೆರವೇರಿಸಿದ್ದು, ಬಾಲಕ ಇದೀಗ ಸಂಪೂರ್ಣ ಚೇತರಿಕೆಯ ಹಾದಿಯಲ್ಲಿದ್ದಾನೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪರಿಣಿತ ವೈದ್ಯರ ತಂಡದಿಂದ ಯಶಸ್ವಿ ಚಿಕಿತ್ಸೆ ಈ ಶಸ್ತ್ರಚಿಕಿತ್ಸೆಯನ್ನು ಬಳ್ಳಾರಿ ಮೆಡಿಕಲ್ ಕಾಲೇಜಿನ ಖ್ಯಾತ ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಗಡ್ಡಿ ದಿವಾಕರ್ ಅವರು ಯಶಸ್ವಿಯಾಗಿ ನೆರವೇರಿಸಿದರು. ಅವರಿಗೆ ಅರವಳಿಕೆ ತಜ್ಞರಾದ ಡಾ. ಸತೀಶ್ ಸಹಕಾರ ನೀಡಿದರು. ವೈದ್ಯರ ತಂಡದ ನಿಪುಣತೆ ಮತ್ತು ಸಮಯೋಚಿತ ಚಿಕಿತ್ಸೆಯಿಂದ ಬಾಲಕನ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಂಡುಬಂದಿದೆ.


ಬಡ ರೋಗಿಗಳ ಆಶ್ರಯವಾಗಿ ಬೆಳೆಯುತ್ತಿರುವ ಸಹನಾ ಮಕ್ಕಳ ಆಸ್ಪತ್ರೆ ಸಿಂಧನೂರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ
ಡಾ. ಕೆ. ಶಿವರಾಜ್ ಪಾಟೀಲ್ ನೇತೃತ್ವದ ಸಹನಾ ಮಕ್ಕಳ ಆಸ್ಪತ್ರೆ ಮಹತ್ವದ ಪಾತ್ರ ವಹಿಸುತ್ತಿದೆ. ಕಳೆದ ಎರಡು ವರ್ಷಗಳಿಂದ ಮಕ್ಕಳಿಗೆ ಸಂಬಂಧಿಸಿದ ಹಲವಾರು ಕ್ಲಿಷ್ಟಕರ ಕಾಯಿಲೆಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಮೂಲಕ ಆಸ್ಪತ್ರೆ ಜನರ ವಿಶ್ವಾಸ ಗಳಿಸಿದೆ.
ಸಾರ್ವಜನಿಕರಿಗೆ ಲಭ್ಯವಿರುವ ವಿಶೇಷ ಸೌಲಭ್ಯಗಳು
✅ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆ
ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಮಕ್ಕಳ ಶಸ್ತ್ರಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಲಾಗುತ್ತಿದೆ.
✅ ಉಚಿತ ಚಿಕಿತ್ಸೆಯ ಸೌಲಭ್ಯ
ಕೆಳಕಂಡ ಸರ್ಕಾರಿ ಆರೋಗ್ಯ ಯೋಜನೆಗಳಡಿ ನೋಂದಾಯಿತ ಕುಟುಂಬಗಳಿಗೆ ಶಸ್ತ್ರಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ನೆರವೇರಿಸಲಾಗುತ್ತಿದೆ

- ಆಯುಷ್ಮಾನ್ ಭಾರತ್ ಯೋಜನೆ
- ಯಶಸ್ವಿನಿ ಯೋಜನೆ
- ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ
ಇದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಹತ್ತರ ನೆರವಾಗುತ್ತಿದೆ.
“ಬಡ ಕುಟುಂಬಗಳು ಸೌಲಭ್ಯ ಸದುಪಯೋಗಪಡಿಸಿಕೊಳ್ಳಲಿ” – ಡಾ. ಶಿವರಾಜ್ ಪಾಟೀಲ್
ಈ ಕುರಿತು ಮಾತನಾಡಿದ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಖ್ಯಾತ ಮಕ್ಕಳ ತಜ್ಞರಾದ ಡಾ. ಕೆ. ಶಿವರಾಜ್ ಪಾಟೀಲ್, “ಆರ್ಥಿಕ ಸಂಕಷ್ಟದಲ್ಲಿರುವ ಬಡ ಕುಟುಂಬಗಳು ಆಸ್ಪತ್ರೆಯಲ್ಲಿ ಲಭ್ಯವಿರುವ ಸರ್ಕಾರಿ ಯೋಜನೆಗಳು ಹಾಗೂ ರಿಯಾಯಿತಿ ಚಿಕಿತ್ಸಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಗುಣಮಟ್ಟದ ಚಿಕಿತ್ಸೆಯನ್ನು ಕಡಿಮೆ ವೆಚ್ಚದಲ್ಲಿ ಜನರಿಗೆ ನೀಡುವುದು ನಮ್ಮ ಪ್ರಮುಖ ಉದ್ದೇಶ” ಎಂದು ಹೇಳಿದರು.

ಗ್ರಾಮೀಣ ಭಾಗದ ಜನರಿಗೆ ಆಶಾಕಿರಣ
ಸಹನಾ ಮಕ್ಕಳ ಆಸ್ಪತ್ರೆ ಕೇವಲ ಒಂದು ಆಸ್ಪತ್ರೆಯಾಗಿಯೇ ಉಳಿಯದೆ, ಗ್ರಾಮೀಣ ಭಾಗದ ಸಾವಿರಾರು ಕುಟುಂಬಗಳಿಗೆ ಭರವಸೆಯ ಕೇಂದ್ರವಾಗುತ್ತಿದೆ. ಬಡ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುತ್ತಿರುವುದು ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ.
ಮಕ್ಕಳ ಆರೋಗ್ಯ ಕ್ಷೇತ್ರದಲ್ಲಿ ವೈದ್ಯಕೀಯ ಸಾಧನೆಗಳ ಮೂಲಕ ಸಹನಾ ಮಕ್ಕಳ ಆಸ್ಪತ್ರೆ ಸಿಂಧನೂರಿನ ಆರೋಗ್ಯ ಸೇವೆಯಲ್ಲಿ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ ಎನ್ನಬಹುದು.












