ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಖಾಸಗಿ ಶಾಲೆಗಳ ಡೊನೇಷನ್ ದಂಧೆಗೆ ಕಡಿವಾಣ ಹಾಕಿ: ಎಸ್‌ಎಫ್‌ಐ ಆಗ್ರಹ

ಮೇ 7ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ – ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬೃಹತ್ ಹೋರಾಟ

BB NEWS KANNADA 

ಕೊಪ್ಪಳ: ಖಾಸಗಿ, ಅನುದಾನ ರಹಿತ ಹಾಗೂ ಅನುದಾನಿತ ಶಾಲೆಗಳಲ್ಲಿ ನಡೆಯುತ್ತಿರುವ ಅಕ್ರಮ ಡೊನೇಷನ್ ವಸೂಲಿ ಮತ್ತು ಶಿಕ್ಷಣ ಹಕ್ಕು ಕಾಯ್ದೆಯ ಉಲ್ಲಂಘನೆ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯ ಸಮಿತಿ ಮೇ 7ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಅದರ ಭಾಗವಾಗಿ ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್‌ಎಫ್‌ಐ ಕೊಪ್ಪಳ ಜಿಲ್ಲಾ ಸಮಿತಿ ತಿಳಿಸಿದೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, 2025-26ನೇ ಶೈಕ್ಷಣಿಕ ವರ್ಷ ಮುಕ್ತಾಯಗೊಂಡು 2026-27ನೇ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಸಂದರ್ಭದಲ್ಲಿ ಶಾಲಾ ದಾಖಲಾತಿ ಪ್ರಕ್ರಿಯೆಗಳು ಈಗಾಗಲೇ ಪ್ರಾರಂಭವಾಗಿವೆ. ಆದರೆ ಅನೇಕ ಖಾಸಗಿ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆ-2009ರ ನಿಯಮಗಳನ್ನು ಉಲ್ಲಂಘಿಸಿ ಪೋಷಕರಿಂದ ಲಕ್ಷಾಂತರ ರೂಪಾಯಿ ಡೊನೇಷನ್ ಹಾಗೂ ಅನಧಿಕೃತ ಶುಲ್ಕಗಳನ್ನು ವಸೂಲಿ ಮಾಡುತ್ತಿವೆ ಎಂದು ಆರೋಪಿಸಿದರು.

ಶಿಕ್ಷಣ ಹಕ್ಕು ಕಾಯ್ದೆ-2009ರ ಸೆಕ್ಷನ್ 2(b) ಅನ್ವಯ ಖಾಸಗಿ ಶಾಲೆಗಳು ತಮ್ಮ ಶುಲ್ಕ ವಿವರಗಳನ್ನು ಶಾಲೆಯ ಸೂಚನಾ ಫಲಕ, ಶಾಲಾ ಜಾಲತಾಣ ಹಾಗೂ ಇಲಾಖೆಯ SATS ಪೋರ್ಟಲ್‌ನಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ಜೊತೆಗೆ ಸೆಕ್ಷನ್ 13 ಹಾಗೂ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣ ಹಕ್ಕು ನಿಯಮಗಳು-2012 ಪ್ರಕಾರ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ವಸೂಲಾತಿ ನಡೆಸಬೇಕು. ಆದರೆ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಈ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಎಸ್‌ಎಫ್‌ಐ ದೂರಿದೆ.

ತಾಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಖಾಸಗಿ ಶಾಲೆಗಳ ದಾಖಲಾತಿ ಪ್ರಕ್ರಿಯೆ ಹಾಗೂ ಶುಲ್ಕ ವಸೂಲಾತಿ ಬಗ್ಗೆ ಪರಿಶೀಲನೆ ನಡೆಸಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ರಚಿಸಿ, ನಿಯಮ ಉಲ್ಲಂಘನೆ ಮಾಡುವ ಹಾಗೂ ಡೊನೇಷನ್ ಪಡೆಯುವ ಶಾಲೆಗಳ ಮಾನ್ಯತೆ ರದ್ದುಪಡಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ರಾಜ್ಯ ಸಮಿತಿಯ ಕರೆಯಂತೆ ಮೇ 7ರಂದು ನಡೆಯುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟನೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಈಚನಾಳ, ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ಉಪಾಧ್ಯಕ್ಷರಾದ ನಾಗರಾಜ್ ಯು., ಶರೀಫ್, ಹನುಮೇಶ್ ಮ್ಯಾಗೇಡೆ, ಜಂಟಿ ಕಾರ್ಯದರ್ಶಿಗಳಾದ ಬಸಯ್ಯ ಹೆಚ್., ದರ್ಶನ್ ಹೊಸ್ಕೆರ, ಕನಕಾಚಲ ಹಾಗೂ ಸದಸ್ಯರಾದ ಶರಣಬಸು ಬಾದ್ನಟ್ಟಿ, ಮೌನೇಶ್, ರಮೇಶ್, ಲಕ್ಷ್ಮಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಭರ್ಜರಿ ಗೆಲುವು, ಸಮರ್ಥ್ ಶಾಮನೂರ್ ವಿಜಯಿಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು, ಬಿಜೆಪಿಗೆ ಹಿನ್ನಡೆಗದಗ ಜಾತ್ರೆಯಲ್ಲಿ ಅವಘಡ: ಡಾನ್ಸಿಂಗ್ ಪ್ಲೇಟ್ ಮುರಿದು 18 ಮಂದಿಗೆ ಗಾಯಖಾಸಗಿ ಶಾಲೆಗಳ ಡೊನೇಷನ್ ದಂಧೆಗೆ ಕಡಿವಾಣ ಹಾಕಿ: ಎಸ್‌ಎಫ್‌ಐ ಆಗ್ರಹಕಣ್ಣಿಗೆ ಕಾಣದ ಅಪಾಯ: ಅತಿ ಹೆಚ್ಚಿನ ಯುವಿ ಕಿರಣಗಳಿಂದ ಆರೋಗ್ಯಕ್ಕೆ ಭೀತಿಜನಮಾನಸ ಗೆದ್ದ ಶರಣರ ಆರೋಗ್ಯಕ್ಕಾಗಿ ಚರ್ಚಿನಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆಸಿಂಧನೂರಿನ ಯುವಕನ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಪತ್ರಸಿಂಧನೂರಿಗೆ ಅಭಿನಯ ಚಕ್ರವರ್ತಿ ಸುದೀಪ್ ಆಗಮನಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆ