ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳುವಂತೆ ಮನವಿ

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಗೆ ಮನವಿ

Advertisement

📍ಸಿಂಧನೂರು : ತಾಲೂಕಿನ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಗೋ ಸಾಗಾಟ ಮತ್ತು ಗೋಹತ್ಯೆ ನಡೆಯುತ್ತಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಿಂಧನೂರು ಘಟಕದ ಪದಾಧಿಕಾರಿಗಳು ಗ್ರಾಮೀಣ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು.

Advertisement

news_1779725225_0_325.webp

ಈ ಕುರಿತು ಮನವಿ ಸಲ್ಲಿಸಿರುವ ಸಂಘಟನೆಗಳ ಪದಾಧಿಕಾರಿಗಳು, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣಾ ಅಧಿನಿಯಮ 2020ರ ಅಡಿಯಲ್ಲಿ ಗೋ ಹತ್ಯೆ ನಿಷೇಧಿಸಲಾಗಿದ್ದರೂ ಕೆಲವರು ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ. ಸಿಂಧನೂರಿನ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋಹತ್ಯೆ ನಿರಂತರವಾಗಿ ನಡೆಯುತ್ತಿದ್ದು, ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

news_1778905892_0_440.webp

news_1778142080_0_556.webp

ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವ ವಾಹನಗಳನ್ನು ತಡೆದು ಪರಿಶೀಲನೆ ನಡೆಸಬೇಕು. ಗೋ ಹತ್ಯೆಗೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ರಾತ್ರಿ ವೇಳೆ ವಿಶೇಷ ತಪಾಸಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗಿದೆ. ಅದೇ ರೀತಿ ಗೋ ರಕ್ಷಣೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಿ, ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

news_1777986246_0_709.webp

ಮನವಿಯ ಪ್ರತಿಯಲ್ಲಿ ಸಿಂಧನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಾತ್ರಿ ಸಮಯದಲ್ಲಿ ಅನುಮಾನಾಸ್ಪದ ವಾಹನಗಳ ಸಂಚಾರ ಹೆಚ್ಚಾಗಿದೆ ಎಂಬ ಆರೋಪವೂ ಮಾಡಲಾಗಿದೆ. ಮನವಿ ಸಲ್ಲಿಸುವ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಪ್ರಮುಖರಾದ ದೇವರಾಜ ಪಾಟೀಲ್, ನಾಗರಾಜ ಪವಾರ್, ತಿಮ್ಮಪ್ಪ ಕೆಂಗೋಡಮಾರ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳುವಂತೆ ಮನವಿಸರಕಾರಿ ನೌಕರಿ,ಸಂಬಳ ಬೇಕು ಆದರೆ ನಿಯಮ ಬೇಡವಾ...?ಪಿಸ್ತೂಲ್‌ನೊಂದಿಗೆ ಓಡಾಡುತ್ತಿರುವ ಉಪಲೋಕಾಯುಕ್ತ ಬಿ.ವೀರಪ್ಪ“ಕಾಕ್‌ರೋಚ್ ಜನತಾ ಪಾರ್ಟಿ” ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ಸಹನಾ ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಸಾಧನೆಹೃದಯಾಘಾತದ ಹಾವಳಿ! ಯುವಜನತೆ ಆತಂಕದಲ್ಲಿ!ವೈದ್ಯರ ಚೀಟಿ ಇಲ್ಲದೆ ಮಾತ್ರೆ ಮಾರಾಟ ಮಾಡಿದರೆ ಕಠಿಣ ಕ್ರಮಇಬ್ಬರ ಜಗಳ ಮೂರನೆಯವರಿಗೆ ಲಾಭ” ಗಾದೆ ಮಾತು ನಿಜವಾಗುತ್ತಾ..?ಸಿಂಧನೂರು ಪರಿಶಿಷ್ಟ ಜಾತಿ ಬಾಲಕರ ವಸತಿ ನಿಲಯದಲ್ಲಿ ಸಮಸ್ಯೆಗಳ ಆಗರಕಿಸ್ಕಿಂದ ಹೆರಿಟೇಜ್ ರೆಸಾರ್ಟ್‌ನಲ್ಲಿ ಪ್ರವಾಸಿಗರ ಚಿನ್ನದ ಸರ ಕಳವು....?‘ಖಾಕಿ’ ಗೂಂಡಾಗಿರಿ ಆರೋಪ: ಸಾರ್ವಜನಿಕನಿಗೆ ಪಿಎಸ್‌ಐ ಕಿರಣ ಮೋಹಿತೆ ಅಶ್ಲೀಲ ನಿಂದನೆ?“ವೇಗದ ತನಿಖೆ, ಖಡಕ್ ಕಾರ್ಯಾಚರಣೆ: ಪಿಎಸ್‌ಐ ಎರಿಯಪ್ಪ ಅಂಗಡಿಗೆ ಎಸ್‌ಪಿ ಮೆಚ್ಚುಗೆ”ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳಿಗೆ ಅವಕಾಶ: ಸಮಾಜದಲ್ಲಿ ಹೆಚ್ಚಿದ ಚರ್ಚೆಜನಸ್ನೇಹಿ ಆಡಳಿತದ ಮೂಲಕ ಇತಿಹಾಸ ಬರೆದ ಜಿಲ್ಲಾಧಿಕಾರಿಸಿಂಧನೂರಿನಲ್ಲಿ ಸಾಧು ವೇಷದಲ್ಲಿ ಕಳ್ಳರ ಕೈಚಳಕ