ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿ

Advertisement

ರಾಯಚೂರು, ಜೂನ್ 19: ಮಕ್ಕಳ ಹಕ್ಕುಗಳ ರಕ್ಷಣೆ, ಅಪೌಷ್ಟಿಕತೆ ತಡೆ ಹಾಗೂ ಮಕ್ಕಳ ಕಲ್ಯಾಣ ಸೇವೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿ ಅವರು ಜೂನ್ 18ರಂದು ರಾಯಚೂರಿನ ವಿವಿಧ ಮಕ್ಕಳ ಕಲ್ಯಾಣ ಹಾಗೂ ಆರೋಗ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

news_1780161285_0_154.webp

ಮೊದಲಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪೌಷ್ಟಿಕ ಮಕ್ಕಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು. ಅಲ್ಲದೆ ಮಕ್ಕಳ ಪಾಲಕರೊಂದಿಗೆ ಸಮಾಲೋಚನೆ ನಡೆಸಿ, ಮಕ್ಕಳ ಆರೋಗ್ಯ, ಪೌಷ್ಟಿಕ ಆಹಾರ ಹಾಗೂ ಚಿಕಿತ್ಸೆ ಕುರಿತಂತೆ ಮಾಹಿತಿ ಪಡೆದುಕೊಂಡರು. ಮಕ್ಕಳ ಆರೋಗ್ಯ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು.

news_1781868198_3_550.webp

ನಂತರ ರಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್ಗೆ ಭೇಟಿ ನೀಡಿ, ಮಹಿಳೆಯರು ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ಮಾಹಿತಿ ಪಡೆದರು. ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳ ನಿರ್ವಹಣೆ, ದೌರ್ಜನ್ಯ ತಡೆ, ಕಾನೂನು ನೆರವು ಹಾಗೂ ಪುನರ್ವಸತಿ ಕ್ರಮಗಳ ಬಗ್ಗೆ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು. ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

news_1781868197_0_444.webp

ಬಳಿಕ ರಾಯಚೂರಿನ ಆಗಾಫೆ ಚರ್ಚ್ ಸಮೀಪದಲ್ಲಿರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ನೀಡಿದ ಅವರು ಅಲ್ಲಿನ ಮಕ್ಕಳೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ನಂತರ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ, ಸುರಕ್ಷತೆ ಹಾಗೂ ಆರೈಕೆ ಸೌಲಭ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿದರು. ಪರಿಶೀಲನೆ ವೇಳೆ ಸಂಸ್ಥೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರ ವ್ಯವಸ್ಥೆ, ಆರೋಗ್ಯ ಸೇವೆಗಳು ಹಾಗೂ ರಕ್ಷಣಾ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಸತ್ಯ ನಾರಾಯಣ ಶೆಟ್ಟಿ ಅವರು ಮಕ್ಕಳ ಹಕ್ಕುಗಳ ಸಂರಕ್ಷಣೆ ಮತ್ತು ಸಮಗ್ರ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

news_1781868198_2_424.webp

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ.ಡಿ. ಗೋಕುಲ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಸುದರ್ಶನ, ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮನ್ಸೂರ್ ಅಹ್ಮದ್ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ವಿವಿಧ ಇಲಾಖೆಗಳ ಅಧೀಕ್ಷಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಮಕ್ಕಳ ಹಕ್ಕುಗಳ ರಕ್ಷಣೆ, ಅಪೌಷ್ಟಿಕತೆ ನಿರ್ಮೂಲನೆ ಹಾಗೂ ಸುರಕ್ಷಿತ ಬಾಲ್ಯ ನಿರ್ಮಾಣಕ್ಕೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿ ಅವರು ಕರೆ ನೀಡಿದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ