ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಡೊನೇಷನ್ ಹಾವಳಿ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ

ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಇಒಗೆ ಮನವಿ

Advertisement

news_1778048979_0_441.webp

Advertisement

ಮೇ 07. ಕೊಪ್ಪಳ BB NEWS KANNADA 

ಗಂಗಾವತಿ: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಡೊನೇಷನ್ ಹಾವಳಿ ತಡೆಗಟ್ಟಲು ಹಾಗೂ ‘ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ’ ರಚಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಗಂಗಾವತಿ ತಾಲೂಕು ಸಮಿತಿಯವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

news_1778142080_0_556.webp

ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಮಾತನಾಡಿ, ರಾಜ್ಯದ ಅನೇಕ ಖಾಸಗಿ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆ-1983 ಮತ್ತು 2009ರ ಆರ್‌ಟಿಇ ಕಾಯ್ದೆಯನ್ನು ಉಲ್ಲಂಘಿಸಿ ದಾಖಲಾತಿ ಹೆಸರಿನಲ್ಲಿ ಡೊನೇಷನ್ ವಸೂಲಿ ಮಾಡುತ್ತಿವೆ ಎಂದು ಆರೋಪಿಸಿದರು. ಬಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವುದು ಕಷ್ಟಕರವಾಗುತ್ತಿದೆ ಎಂದು ಹೇಳಿದರು.

news_1778154664_0_896.webp

ಖಾಸಗಿ ಶಾಲೆಗಳು ಅನಧಿಕೃತವಾಗಿ ಪ್ರವೇಶ ಪರೀಕ್ಷೆ ನಡೆಸುವುದು, JEE, NEET, CET ತರಬೇತಿ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದು, ಶಾಲಾ ಸಾಮಗ್ರಿಗಳನ್ನು ಕಡ್ಡಾಯವಾಗಿ ಖರೀದಿಸಲು ಒತ್ತಾಯಿಸುವ ಮೂಲಕ ಪಾಲಕರ ಮೇಲೆ ಆರ್ಥಿಕ ಭಾರ ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

news_1777986246_0_709.webp

 

news_1777986272.webp

ತಾಲೂಕ ಅಧ್ಯಕ್ಷ ನಾಗರಾಜ್ ಯು ಮಾತನಾಡಿ, ಸರ್ಕಾರ ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲಾ ಆವರಣದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ನಿಯಮ ಮೀರಿ ಡೊನೇಷನ್ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅನಧಿಕೃತ ಟ್ಯೂಷನ್ ಸೆಂಟರ್‌ಗಳನ್ನು ತಕ್ಷಣ ಮುಚ್ಚಬೇಕು ಎಂದು ಒತ್ತಾಯಿಸಿದರು.

news_1777804015_0_413.webp

 

ಪ್ರಮುಖ ಹಕ್ಕೊತ್ತಾಯಗಳು:

ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರವನ್ನು ತಕ್ಷಣ ರಚಿಸಬೇಕು.

ಡೊನೇಷನ್ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.

ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರ ನೇತೃತ್ವದಲ್ಲಿ ಪಾಲಕರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜಂಟಿ ಸಭೆ ಕರೆಯಬೇಕು.

ಸರ್ಕಾರ ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲೆಗಳ ಮುಂದೆ ಕಡ್ಡಾಯವಾಗಿ ಪ್ರದರ್ಶಿಸಬೇಕು.

ನಿಯಮ ಮೀರಿ ಪ್ರವೇಶ ಪರೀಕ್ಷೆ ನಡೆಸುವ ಹಾಗೂ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಶಾಲೆಗಳಿಗೆ ದಂಡ ವಿಧಿಸಬೇಕು.

ಅನಧಿಕೃತ ಟ್ಯೂಷನ್ ಸೆಂಟರ್ ಹಾಗೂ ಖಾಸಗಿ ಶಾಲೆಗಳನ್ನು ನಿಯಂತ್ರಿಸಬೇಕು.

ಮನವಿಗೆ ಸ್ಪಂದಿಸಿದ ಬಿಇಒ ಅಧಿಕಾರಿ ನಟೇಶ್ ಅವರು, ಡೊನೇಷನ್ ವಸೂಲಿ ಹಾಗೂ ಫೀ ವಿವರಗಳ ಫ್ಲೆಕ್ಸ್ ಪ್ರದರ್ಶಿಸದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

news_1777542755_0_368.webp

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ತಾಲೂಕ ಅಧ್ಯಕ್ಷ ನಾಗರಾಜ್ ಯು, ಬಾಳಪ್ಪ ಹುಲಿಹೈದರ್, ಬಸಯ್ಯ, ಶರಣಬಸವ ಬಾದ್ನಟ್ಟಿ, ದೊಡ್ಡಬಸವ, ಯಂಕಣ್ಣ, ಅಲ್ತಾಫ್, ಕಾರ್ತಿಕ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಜಪ್ತಿ ಆಹಾರ ಧಾನ್ಯಗಳ ಬಹಿರಂಗ ಹರಾಜು ಜುಲೈ 02ಕ್ಕೆತುಂಗಭದ್ರಾ ಕ್ರಸ್ಟ್ ಗೇಟ್ ಉದ್ಘಾಟನೆಗೆ ಚಂದ್ರಬಾಬು ನಾಯ್ಡುಗೆ ಆಹ್ವಾನಮಕ್ಕಳ ಆರೋಗ್ಯ ಹಕ್ಕು ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಖಾಲಿ ಪೇಪರ್ ಸಹಿ ವಿವಾದ: ಪಿಎಸ್‌ಐ ವಿರುದ್ಧ ವಕೀಲರ ಆಕ್ರೋಶಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!