ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

 ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿ

“ಏಪ್ರಿಲ್ 14ರಿಂದ ಕಾಣೆಯಾದ ಬಿಎಸ್ಸಿ ವಿದ್ಯಾರ್ಥಿ – ಕುಟುಂಬಸ್ಥರ ಕಣ್ಣೀರಿನ ಮನವಿ”

ಸಿಂಧನೂರು, ಏಪ್ರಿಲ್ 30: BB NEWS KANNADA 

ತಾಲೂಕಿನ ಯುವಕನೊಬ್ಬ ಕಳೆದ ಏಪ್ರಿಲ್ 14ರಿಂದ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಾಣೆಯಾದ ಯುವಕನನ್ನು ಸುರೇಶ್ (21) ಎಂದು ಗುರುತಿಸಲಾಗಿದೆ.

ಸುರೇಶ್ ಅವರು “ಧಾರವಾಡಕ್ಕೆ ಹೋಗುತ್ತೇನೆ” ಎಂದು ಹೇಳಿ ಸಿಂಧನೂರಿನಿಂದ ಹೊರಟಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕೊನೆಯದಾಗಿ ಅವರು ಸಿಂಧನೂರು ತಾಲೂಕಿನ ಹುಡಾ ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುರೇಶ್ 21 ವರ್ಷ ಕಾಣೆಯಾಗಿರುವ ಯುವಕ
ಸುರೇಶ್ 21 ವರ್ಷ ಕಾಣೆಯಾಗಿರುವ ಯುವಕ

 

ಸುರೇಶ್ ಅವರು ಬಿಎಸ್ಸಿ (2ನೇ ವರ್ಷ) ವಿದ್ಯಾರ್ಥಿಯಾಗಿದ್ದು, ಸುಮಾರು 5.5 ಅಡಿ ಎತ್ತರ, ಸ್ವಲ್ಪ ಕಪ್ಪು ಮೈಬಣ್ಣ ಹೊಂದಿದ್ದಾರೆ. ಕಾಣೆಯಾದ ವೇಳೆ ಪ್ಯಾಂಟ್ ಮತ್ತು ಶರ್ಟ್ ಧರಿಸಿದ್ದರು. ವಿಶೇಷ ಗುರುತು ಎಂದರೆ ಬಲಗಣ್ಣಿನ ಬಳಿ ಸ್ವಲ್ಪ ಕಪ್ಪು ಗುರುತು ಇರುವುದಾಗಿದೆ.

ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

news_1777542755_0_368.webp

🟦 ಪೋಷಕರ ಕಣ್ಣೀರಿನ ಮನವಿ:

ಕಾಣೆಯಾದ ಸುರೇಶ್ ಅವರ ತಂದೆ ಶರಣಪ್ಪ ಹುನಗುಂದ ಮತ್ತು ತಾಯಿ ಬಸಮ್ಮ ಹುನಗುಂದ ಭಾವನಾತ್ಮಕವಾಗಿ ಮನವಿ ಮಾಡಿಕೊಂಡಿದ್ದಾರೆ:

“ಮಗನೆ, ನೀನು ಎಲ್ಲೇ ಇದ್ದರೂ ದಯವಿಟ್ಟು ಮನೆಗೆ ಮರಳಿ ಬಾ. ನಿನ್ನನ್ನು ಬಿಟ್ಟು ನಾವು ಇರಲು ಸಾಧ್ಯವಾಗುತ್ತಿಲ್ಲ. ಒಂದು ವಾರದಿಂದ ಊಟ-ನೀರು ಬಿಟ್ಟು ಆರೋಗ್ಯ ಕಳೆದುಕೊಂಡಿದ್ದೇವೆ. ನಿನಗೆ ಏನೇ ಸಮಸ್ಯೆ ಇದ್ದರೂ ನಾವು ಪರಿಹರಿಸುತ್ತೇವೆ. ಕೈ ಮುಗಿದು ಕೇಳುತ್ತೇವೆ, ದಯವಿಟ್ಟು ಬೇಗ ಮನೆಗೆ ಬಾ” ಎಂದು ಕಣ್ಣೀರಿನಿಂದ ಮನವಿ ಮಾಡಿದ್ದಾರೆ.

 

🟩 ಮಾಹಿತಿ ನೀಡಲು ಮನವಿ:

ಯುವಕನ ಬಗ್ಗೆ ಯಾವುದೇ ಸುಳಿವು ದೊರೆತಲ್ಲಿ, ದಯವಿಟ್ಟು ಕೆಳಗಿನ ಸಂಖ್ಯೆಗಳ ಮೂಲಕ ಸಂಪರ್ಕಿಸಲು ವಿನಂತಿಸಲಾಗಿದೆ:

📞 ಶರಣಪ್ಪ: 8152039312

📞 ನಾಗರಾಜ್: 7760652735

📞 ವಿಜಯಕುಮಾರ: 9845945328

📞 ಬಡವರ ಬಾರಕೋಲು ಪತ್ರಿಕಾ ಕಚೇರಿ: 9535111986

ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ

👉 ಸೂಚನೆ:

ಈ ಯುವಕನ ಪತ್ತೆಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
 ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ”