ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪ

ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಗೋಳು ವಿದ್ಯಾರ್ಥಿ ಪಾಸ್‌ಗೆ ಗೌರವ ಇಲ್ಲವೇ?

Advertisement

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಸಿಬ್ಬಂದಿಗಳ ಕಿರಿಕಿರಿ? ಹಳ್ಳಿಗಳಲ್ಲಿ ಬಸ್ ನಿಲುಗಡೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ – ಶಾಸಕರ ಸೂಚನೆಯೂ ಇನ್ನೂ ಜಾರಿಗೆ ಬಂದಿಲ್ಲ ಎಂಬ ಆರೋಪ

Advertisement

news_1779340187_0_802.webp

ಸಿಂಧನೂರು: ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ ಸಿಬ್ಬಂದಿಯಿಂದ ಅನಗತ್ಯ ಕಿರಿಕಿರಿ ಉಂಟಾಗುತ್ತಿದೆ ಎಂದು ವಿದ್ಯಾರ್ಥಿಗಳು ಹಾಗೂ ಖಾಸಗಿ ಶಾಲಾ-ಕಾಲೇಜು ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಸಿಂಧನೂರಿನಿಂದ ಮಸ್ಕಿ, ಒಳಬಳ್ಳಾರಿ, ಮಾನ್ವಿ, ಕಾರಟಗಿ ಹಾಗೂ ಸಿರುಗುಪ್ಪ ಮಾರ್ಗಗಳಲ್ಲಿ ಸಂಚರಿಸುವ ಅನೇಕ ಬಸ್‌ಗಳು ಮಧ್ಯದಲ್ಲಿರುವ ಹಲವು ಹಳ್ಳಿಗಳಲ್ಲಿ ನಿಲುಗಡೆ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಸಿಂಧನೂರು–ಮಸ್ಕಿ ಮಾರ್ಗದಲ್ಲಿ ಕಲ್ಲೂರು, ಪಗಡದಿನ್ನಿ, ಕುನ್ನಟಗಿ, ಬಸಾಪುರ, ತಲೆಕೂಡ್ಲಿಗಿ, ಮುದ್ದಾಪುರ, ಗುಡದೂರು ಸೇರಿದಂತೆ ಹಲವು ಗ್ರಾಮಗಳು ಇದ್ದರೂ, ಎಲ್ಲ ಗ್ರಾಮಗಳಲ್ಲೂ ಬಸ್ ನಿಲ್ಲಿಸದೆ ಕೆಲವೇ ಪ್ರಮುಖ ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ ನೀಡಲಾಗುತ್ತಿದೆ ಎನ್ನಲಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರತಿದಿನ ಶಾಲೆ ಹಾಗೂ ಕಾಲೇಜುಗಳಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

news_1778142080_0_556.webp

ವಿದ್ಯಾರ್ಥಿಗಳ ಹೇಳಿಕೆಯ ಪ್ರಕಾರ, ಬಸ್ ನಿಲ್ಲಿಸುವಂತೆ ಕೇಳಿದಾಗ ಕೆಲ ಚಾಲಕರು ಹಾಗೂ ನಿರ್ವಾಹಕರು, "ಯಾಕೆ ಬರುತ್ತೀರಿ?", "ದೊಡ್ಡ ದೊಡ್ಡ ಬ್ಯಾಗ್‌ಗಳನ್ನು ಹೊತ್ತುಕೊಂಡು ಬರುತ್ತೀರಿ", "ಸಾರ್ವಜನಿಕರಿಗೆ ತೊಂದರೆ ಆಗುತ್ತದೆ", "ಪಾಸ್ ಇದೆ ಅಲ್ವಾ, ಹಿಂದಿನ ಬಸ್‌ನಲ್ಲಿ ಬನ್ನಿ" ಎಂಬ ರೀತಿಯ ಮಾತುಗಳ ಮೂಲಕ ಗದರಿಸಿ ಮಾನಸಿಕ ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇಂತಹ ವರ್ತನೆಯಿಂದ ಪ್ರತಿನಿತ್ಯ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಆತಂಕ ಮತ್ತು ಅವಮಾನ ಅನುಭವಿಸುವಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

news_1780037113_0_501.webp

ಶಾಸಕರ ಸೂಚನೆಗೂ ಜಾರಿಗೆ ಬಂದಿಲ್ಲವೇ?

ಎಲ್ಲಾ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಾದ ಬಸ್ ಸೌಲಭ್ಯ ಕಲ್ಪಿಸುವಂತೆ ಖಾಸಗಿ ಶಾಲಾ-ಕಾಲೇಜು ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದರು ಎಂದು ತಿಳಿಸಲಾಗಿದೆ. ಆದರೆ, ಆ ಸೂಚನೆ ನೀಡಿದ ಬಳಿಕವೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮ್ಯಾನೇಜರ್ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಜನಪ್ರತಿನಿಧಿಯ ಸೂಚನೆಯೂ ಅನುಷ್ಠಾನಗೊಳ್ಳದಿರುವುದು ಬೇಸರದ ಸಂಗತಿಯಾಗಿದ್ದು, ಇದರ ಪರಿಣಾಮವಾಗಿ ವಿದ್ಯಾರ್ಥಿಗಳು ಇಂದಿಗೂ ಪ್ರತಿದಿನ ಅನಗತ್ಯ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಒಕ್ಕೂಟದ ಸದಸ್ಯರು ತಿಳಿಸಿದ್ದಾರೆ.

news_1781778738_0_399.webp

ತಕ್ಷಣ ಕ್ರಮಕ್ಕೆ ಆಗ್ರಹ

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಎಲ್ಲಾ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಅಗತ್ಯವಿರುವ ಗ್ರಾಮಗಳಿಗೆ ನಿಯಮಿತ ಬಸ್ ನಿಲುಗಡೆ ಮತ್ತು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು. ಬಸ್ ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ಗೌರವಯುತವಾಗಿ ವರ್ತಿಸುವಂತೆ ಸೂಚನೆ ನೀಡಬೇಕು. ಜೊತೆಗೆ ಮಾನ್ಯ ಶಾಸಕರು ನೀಡಿರುವ ನಿರ್ದೇಶನವನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮ್ಯಾನೇಜರ್ ತಕ್ಷಣ ಜಾರಿಗೆ ತಂದು ವಿದ್ಯಾರ್ಥಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಹಾಗೂ ಖಾಸಗಿ ಶಾಲಾ-ಕಾಲೇಜು ಶಿಕ್ಷಣ ಸಂಸ್ಥೆಗಳ ಸದಸ್ಯರು ಆಗ್ರಹಿಸಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್ಮುಂಗಾರು ಹಂಗಾಮಿನ ಬೆಳೆ ವಿಮೆ ಹಾಗೂ ರಸಗೊಬ್ಬರ ದರಗಳ ಪೋಸ್ಟರ್ ಬಿಡುಗಡೆ