ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವರ್ಷಗಳ ಪ್ರೇಮ ಸಂಬಂಧ ಮದುವೆ ಹಂತದಲ್ಲಿ ಮುರಿತ: ಯಾದಗಿರಿಯಲ್ಲಿ ವಿವಾದಕ್ಕೆ ತಿರುವು

Advertisement

 

Advertisement

news_1778048979_0_441.webp

📍 ಯಾದಗಿರಿ, ಮೇ 6:

ಎಂಟು ವರ್ಷಗಳ ಕಾಲ ಮುಂದುವರೆದಿದ್ದ ಪ್ರೇಮ ಸಂಬಂಧ ಮದುವೆ ಹಂತದಲ್ಲಿ ಮುರಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಇದೀಗ ಇದು ವಿವಾದಕ್ಕೆ ಕಾರಣವಾಗಿದೆ.

news_1777986246_0_709.webp

ಇಂಟಲಿಜೆನ್ಸ್ ವಿಭಾಗದಲ್ಲಿ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿರುವ ವೀರೇಶ್ ಆಲೂರು ಹಾಗೂ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಲೇಡಿ ಪೇದೆ ನಡುವೆ ಇದ್ದ ಪ್ರೇಮ ಸಂಬಂಧ ಇದೀಗ ಗಂಭೀರ ತಿರುವು ಪಡೆದಿದೆ.

ಮಾಹಿತಿಯ ಪ್ರಕಾರ, ಇಬ್ಬರೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕೋಚಿಂಗ್ ಸೆಂಟರ್‌ನಲ್ಲಿ ಪರಿಚಯವಾಗಿದ್ದು, ಆ ಪರಿಚಯ ಸ್ನೇಹವಾಗಿ, ನಂತರ ಪ್ರೀತಿಗೆ ತಿರುಗಿದೆ. ಕಳೆದ ಎಂಟು ವರ್ಷಗಳಿಂದ ಆತ್ಮೀಯ ಸಂಬಂಧದಲ್ಲಿದ್ದ ಇಬ್ಬರೂ ಹಲವು ವರ್ಷ ಒಂದೇ ಸ್ಥಳದಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

news_1777804015_0_413.webp

 

news_1777804083.webp

ಇನ್ನೂ ಮುಂದೆ, ರಾಯಚೂರಿನ ಬಾಲಮರೆಮ್ಮ ದೇವಸ್ಥಾನದಲ್ಲಿ ಹಾರ ಬದಲಿಸಿಕೊಂಡು ಮದುವೆ ಪ್ರತಿಜ್ಞೆ ಮಾಡಿಕೊಂಡಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಆದರೆ, ಇತ್ತೀಚೆಗೆ ಮದುವೆ ವಿಚಾರದಲ್ಲಿ ಲೇಡಿ ಪೇದೆ ನಿರಾಕರಣೆ ವ್ಯಕ್ತಪಡಿಸಿದ್ದು, ಪ್ರಕರಣ ತೀವ್ರ ವಿವಾದಕ್ಕೆ ಕಾರಣವಾಗಿದೆ.

 

ಪಿಎಸ್‌ಐ ವೀರೇಶ್ ಆಲೂರು ಅವರು, ಲೇಡಿ ಪೇದೆ ಹಾಗೂ ಅವರ ಕುಟುಂಬಕ್ಕೆ ಸುಮಾರು ₹35 ಲಕ್ಷ ಆರ್ಥಿಕ ನೆರವು ನೀಡಿರುವುದಾಗಿ ಆರೋಪಿಸಿದ್ದಾರೆ. ಮನೆ ನಿರ್ಮಾಣ, ಟ್ರಾಕ್ಟರ್ ಖರೀದಿ ಸೇರಿದಂತೆ ವಿವಿಧ ರೀತಿಯಲ್ಲಿ ಸಹಾಯ ಮಾಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

news_1777542755_0_368.webp

 

news_1777520334_0_925.webp

ಇದೇ ವೇಳೆ, ಲೇಡಿ ಪೇದೆ ಜಯಶ್ರೀ ಅವರು ಮೇ 7ರಂದು ರಾಯಚೂರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದುವೆಯಾಗಲು ಸಿದ್ಧರಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಪ್ರಕರಣದ ಹಿನ್ನೆಲೆ, ರಾಜಿ ಪಂಚಾಯಿತಿ ನಡೆಸಲು ಪ್ರಯತ್ನಗಳು ನಡೆದಿದ್ದು, ಮಾಜಿ ಶಾಸಕ ಶರಣಪ್ಪ ಸುಣಗಾರ ಅವರ ಸಮ್ಮುಖದಲ್ಲಿಯೂ ಮಾತುಕತೆ ನಡೆದಿದೆ. ಅಲ್ಲದೇ, ಪೊಲೀಸ್ ಅಧಿಕಾರಿಗಳ ಮಟ್ಟದಲ್ಲಿಯೂ ಸಮಾಧಾನ ಸಭೆ ನಡೆದರೂ ಯಾವುದೇ ಸ್ಪಷ್ಟ ಪರಿಹಾರ ಕಂಡುಬಂದಿಲ್ಲ.

ಈ ನಡುವೆ “ನನಗೆ ನ್ಯಾಯ ಬೇಕು” ಎಂದು ಪಿಎಸ್‌ಐ ವೀರೇಶ್ ಆಲೂರು ಮನವಿ ಮಾಡಿಕೊಂಡಿದ್ದಾರೆ.

🟡 (ಸಂಪಾದಕೀಯ ಸೂಚನೆ): ಈ ಪ್ರಕರಣ ಕುರಿತು ಸಂಬಂಧಿಸಿದ ಎರಡೂ ಪಕ್ಷಗಳ ಅಧಿಕೃತ ಪ್ರತಿಕ್ರಿಯೆ ಹಾಗೂ ಪೊಲೀಸ್ ತನಿಖೆಯ ಮಾಹಿತಿ ಹೊರಬಂದ ನಂತರ ಹೆಚ್ಚಿನ ವಿವರಗಳು ಸ್ಪಷ್ಟವಾಗುವ ಸಾಧ್ಯತೆ ಇದೆ 

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಆರೋಪ: ₹39,600 ಡ್ರಾ ಪ್ರಕರಣಕ್ಕೆ ಹೊಸ ತಿರುವುಜೋಳ ಖರೀದಿ ಸ್ಥಗಿತ: ಜಿಲ್ಲಾಧಿಕಾರಿಗಳಿಗೆ ರೈತರ ತುರ್ತು ಮನವಿಅಪಪ್ರಚಾರಕ್ಕೆ ಕಿವಿಗೊಡಬೇಡಿ: ಆರ್. ಸಿದ್ದನಗೌಡ ತುರವಿಹಾಳ ಮನವಿಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಎನ್. ಸತ್ಯನಾರಾಯಣ ಶೆಟ್ಟಿ ಸಿಂಧನೂರಿಗೆ ಡಬಲ್ ಧಮಾಕಾ..? ಇಬ್ಬರು ಬಾದರ್ಲಿಗಳಿಗೆ ಸಚಿವ ಸ್ಥಾನ ಸಿಗುತ್ತಾ..?“ಸಿದ್ದರಾಮಯ್ಯ ವ್ಯಕ್ತಿ ಅಲ್ಲ… ಒಂದು ಶಕ್ತಿ”“ಸಿದ್ದು ಸರ್ಕಾರ ಪತನ..! ಇಂದಿನಿಂದ ಎಲ್ಲಾ ಸಚಿವರು ಮಾಜಿ ಸಚಿವರು”ಬುಕ್ಕನಟ್ಟಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಬಸವನಗೌಡ ಬಾದರ್ಲಿಗೆ ಸಚಿವ ಸ್ಥಾನ ಫಿಕ್ಸ್ ಆಗ್ತಿದೆಯಾ..?8 ವರ್ಷದ ಮಕ್ಕಳಿಗೆ ಮುಟ್ಟು..! ಬಾಲ್ಯ ಕಸಿದುಕೊಳ್ಳುತ್ತಿರುವ ಪಿಜ್ಜಾ-ಬರ್ಗರ್ ಸಂಸ್ಕೃತಿ..?ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳುವಂತೆ ಮನವಿಸರಕಾರಿ ನೌಕರಿ,ಸಂಬಳ ಬೇಕು ಆದರೆ ನಿಯಮ ಬೇಡವಾ...?ಪಿಸ್ತೂಲ್‌ನೊಂದಿಗೆ ಓಡಾಡುತ್ತಿರುವ ಉಪಲೋಕಾಯುಕ್ತ ಬಿ.ವೀರಪ್ಪ